11:05 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೆಕ್ಕೆಜೋಳದ ಬೆಲೆಕುಸಿತಕ್ಕೆ ಕ್ರಮ ಕೈಗೊಳ್ಳಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

12/12/2025, 10:37

ನವದೆಹಲಿ(reporterkarnataka.com): ಮೆಕ್ಕೆಜೋಳದ ಬೆಲೆಯಲ್ಲಿನ ತೀವ್ರ ಕುಸಿತವನ್ನು ಪರಿಹರಿಸಲು ತುರ್ತು ಹಸ್ತಕ್ಷೇಪದ ಅವಶ್ಯಕತೆ ಕುರಿತು‌ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಗುರುವಾರ ನಡೆದ ಸಂಸತ್ತಿನ ಅಧಿವೇಶನದ ಶೂನ್ಯ ವೇಳೆಯಲ್ಲಿ ಮಾತನಾಡಿದರು.
ದೇಶದ ಬೆನ್ನೆಲುಬು ಮತ್ತು ಅನ್ನದಾತರಾದ ರೈತರ ತುರ್ತು ಅವಶ್ಯಕತೆ ಬಗ್ಗೆ ಕನ್ನಡದಲ್ಲಿ ಮಾತನಾಡುವ ಮೂಲಕ ಸದನದ ಗಮನಸೆಳೆದರು.
ಮೆಕ್ಕೆಜೋಳ ಬೆಳೆದ ರೈತರು ತೀವ್ರ ಸಂಕಷ್ಟವನ್ನು‌ ಎದುರಿಸುತ್ತಿದ್ದಾರೆ. ಅನುಕೂಲಕರ ಮಳೆಯಿಂದಾಗಿ, ಕರ್ನಾಟಕವು ಈ ಋತುವಿನಲ್ಲಿ ಸುಮಾರು 32 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಹೆಚ್ಚುವರಿಯಾಗಿ ಮಾರುಕಟ್ಟೆಗೆ ಯೋಗ್ಯವಾದ ಮೆಕ್ಕೆಜೋಳವನ್ನು ಉತ್ಪಾದಿಸಿದೆ ಎಂದರು.
ಕೇಂದ್ರ ಸರ್ಕಾರವು ಕ್ವಿಂಟಲ್‌ಗೆ ₹2,400 ಎಂ. ಎಸ್.ಪಿಯನ್ನು ಸೂಚಿಸಿದ್ದರೂ, ಕರ್ನಾಟಕ ಮತ್ತು ಇತರ ರಾಜ್ಯಗಳ ರೈತರು ತಮ್ಮ ಉತ್ಪನ್ನಗಳನ್ನು ಬೆಂಬಲ ಬೆಲೆಗಿಂತ ಕಡಿಮೆ ಮಾರಾಟ ಮಾಡುವ ಪರಿಸ್ಥಿತಿ ಒದಗಿದೆ.NAFED (ನ್ಯಾಷನಲ್ ಅಗ್ರಿಕಲ್ಬರಲ್ ಕೋಅಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್) ಮತ್ತು ಇತರ ಏಜೆನ್ಸಿಗಳ ಮೂಲಕ ಸಂಗ್ರಹಣೆಯು ಅಸಮರ್ಪಕವಾಗಿ ನಡೆಯುತ್ತಿದೆ ಹಾಗೂ
ಖರೀದಿ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸದೇ ಹಾಗೂ ನಿರ್ಬಂಧಿತ ಷರತ್ತುಗಳೊಂದಿಗೆ ಕಾರ್ಯ ನಿರ್ವಹಿಸುತ್ತಿರುವುದರಿಂದಾಗಿ ರೈತರನ್ನು ಖಾಸಗಿ ವ್ಯಾಪಾರಿಗಳ ಕೈಗೆ ತಳ್ಳುತ್ತದೆ ಮತ್ತು ಭಾರೀ ನಷ್ಟವನ್ನು ಉಂಟುಮಾಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಇದು ವಾಡಿಕೆಯ ಮಾರುಕಟ್ಟೆಯ ಏರಿಳಿತವಲ್ಲ ಆದರೆ MSP ಜಾರಿ ಮತ್ತು ಸಂಗ್ರಹಣೆ ಯೋಜನೆಯಲ್ಲಿ ವ್ಯವಸ್ಥಿತ ವೈಫಲ್ಯವಾಗಿದೆ,
ಇದು ನೇರವಾಗಿ ಗ್ರಾಮೀಣ ಜೀವನೋಪಾಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.MSP ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು, ಖರೀದಿ ಕೇಂದ್ರಗಳನ್ನು ವಿಸ್ತರಿಸಲು, ಆಮದುಗಳನ್ನು ನಿರ್ಬಂಧಿಸಲು, PDS ಮತ್ತು ಡಿಸ್ಟಿಲರಿಗಳಲ್ಲಿ ಹೆಚ್ಚುವರಿ ಎಥೆನಾಲ್ ಮಿಶ್ರಣ ತಯಾರಿಸುವ ಮೂಲಕ ಹೆಚ್ಚುವರಿ ಮೆಕ್ಕೆಜೋಳವನ್ನು ಬಳಸಿಕೊಳ್ಳಲು ಮತ್ತು ಬೆಲೆಗಳನ್ನು ಸ್ಥಿರಗೊಳಿಸಲು ಕಾಲಮಿತಿಯ ಯೋಜನೆಯನ್ನು ಘೋಷಿಸಲು ತಕ್ಷಣದ ಕ್ರಮಗಳ ಕುರಿತು ಸರ್ಕಾರ ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದರು.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಶೂನ್ಯವೇಳೆಯ ಅವಧಿಯಲ್ಲಿ ರೈತರ ಸಮಸ್ಯೆಗಳನ್ನು ಕನ್ನಡದಲ್ಲೇ ಮಾತನಾಡುವ ಮೂಲಕ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸದನದ ಗಮನ ಸೆಳೆದಿದ್ದು ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು