1:35 PM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ ‘ವಂದೇ ಮಾತರಂ ಹಾಡಿನ ಮಹತ್ವ’: ರಸ ಪ್ರಶ್ನೆ ಸ್ಪರ್ಧೆ

13/12/2025, 11:13

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ವಂದೇಮಾತರಂ ಹಾಡಿನ ೧೫೦ ವರ್ಷ ಹಾಗೂ ಭಾಷಾ ದಿನದ ಪ್ರಯುಕ್ತ ಹಿಂದಿ ವಿಭಾಗ, ಭಾಷಾ ಸಂಘ, ಸಂಸ್ಕೃತ ಸಂಘ ಹಾಗೂ ಬರೋಡ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ವಿವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ವಂದೇ ಮಾತರಂ ಹಾಡಿನ ಮಹತ್ವ ಅರಿವು ಮೂಡಿಸಲು ರಸ ಪ್ರಶ್ನೆ ಸ್ಪರ್ಧೆ ಆಯೋಜಿಸಲಾಯಿತು.




ಬರೋಡಾ ಬ್ಯಾಂಕಿನ ಮುಖ್ಯ ಪ್ರಬಂಧಕ ಡಾ. ಬಾಲ ಮುರುಗನ್ ಉದ್ಘಾಟಿಸಿ, ಮಾತನಾಡಿ, ಮಹಾಕವಿ ಸುಬ್ರಮಣ್ಯ ಅವರು ಭಾರತೀಯವರ ಜೀವನದ ಪ್ರಮುಖ ವಿಚಾರಗಳನ್ನು ವಿವರಿಸಿದರು. ವಂದೇಮಾತರಂ ಬರೀ ಗೀತೆ ಅಲ್ಲ ಅದು ಭಾವ ಎಂದ ಅವರು ಈ ಗೀತೆಯನ್ನು ತಮಿಳಿನಲ್ಲಿ ಹಾಡಿ ವಿದ್ಯಾರ್ಥಿಗಳ ಗಮನ ಸೆಳೆದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ವಹಿಸಿ ಮಾತನಾಡಿ, ವಂದೇ ಮಾತರಂ ಹಾಡಿನ ಮಹತ್ವವನ್ನು ತಿಳಿಸಿದ ಅವರು, ಜೀವನದುದ್ದಕ್ಕೂ ಗೌರವಿಸುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಕೃತ ವಿಭಾಗ ಮುಖ್ಯಸ್ಥ ಪ್ರೊ. ಕುಮಾರ ಸುಬ್ರಮಣ್ಯ ಭಟ್ ಉಪಸ್ಥಿತರಿದ್ದರು.
ಹಿಂದಿ ವಿಭಾಗ ಮುಖ್ಯಸ್ಥೆ ಪ್ರೊ. ಸುಮಾ ಟಿ.ಆರ್. ಸ್ವಾಗತಿಸಿ, ಉಪಾಧ್ಯಕ್ಷೆ ಪ್ರೊ. ನಾಗರತ್ನ ಎನ್. ರಾವ್ ವಂದಿಸಿದರು. ದ್ವಿತೀಯ ಬಿ.ಎ ವಿದ್ಯಾರ್ಥಿನಿ ರೆಯೋನ ಕಾರ್ಯಕ್ರಮ ನಿರೂಪಿಸಿದರು.
೩೫ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು