6:36 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಬಿಎಸ್ಸೆನ್ನೆಲ್ ಟವರ್‌ಗಳಿಗೆ ಬ್ಯಾಟರಿ ಸೆಟ್‌ ತ್ವರಿತವಾಗಿ ಅಳವಡಿಸಲು ಸಂಸದ ಯದುವೀರ್‌ ಮನವಿ

13/12/2025, 11:41

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭೇಟಿ ಮಾಡಿದ ಮೈಸೂರು-ಕೊಡಗು ಸಂಸದರು,ಕೊಡಗು ಲೋಕಸಭಾ ಕ್ಷೇತ್ರದ ಕೊಡಗು ಜಿಲ್ಲೆಯಲ್ಲಿ ದೂರ ಸಂಪರ್ಕ ಕ್ಷೇತ್ರಕ್ಕೆ ಹೆಚ್ಚುವರಿ ಸೌಲಭ್ಯ ಒದಗಿಸಬೇಕಾದ ಅಗತ್ಯವಿರುವುದರಿಂದ ಕೂಡಲೇ ಟವರ್‌ಗಳಿಗೆ ಬ್ಯಾಟರಿ ಸೆಟ್‌ ಅಳವಡಿಕೆ ಹಾಗೂ 15 ಪವರ್‌ ಪ್ಲಾಂಟ್‌ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿ ಈ ಸಂಬಂಧ ಭೇಟಿ ಮಾಡಿ ಮತ್ತೊಮ್ಮೆ ಮನವಿ ನೀಡಿದ ನಂತರ ಯದುವೀರ್‌ ಒಡೆಯರ್‌ ಈ ಮಾಹಿತಿ ನೀಡಿದ್ದಾರೆ.
ಕಳೆದ ಭಾರಿ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಕಂಬಗಳು ಧರೆಗುರುಳಿದಿದ್ದು, ಇದರಿಂದ ಸಾರ್ವಜನಿಕರಿಗೆ ಸಂಪರ್ಕ ಸಾಧಿಸಲು ಭಾರಿ ತೊಂದರೆ ಎದುರಾಗಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸಚಿವರಿಗೆ ಪತ್ರ ಬರೆದು ಮೂಲ ಸೌಕರ್ಯ ಹೆಚ್ಚಿಸಲು ಆಗ್ರಹಿಸಲಾಗಿತ್ತು ಎಂದರು.
ಈ ನಿಟ್ಟಿನಲ್ಲಿ ಇಂದು ಕೇಂದ್ರ ಸಚಿವರನ್ನು ಮತ್ತೊಮ್ಮೆ ಭೇಟಿ ಮಾಡಿ ಈ ವಿಷಯವನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ, ಈ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮನವಿ ಮಾಡಿದ್ದೇನೆ ಎಂದು ಸಂಸದರು ವಿವರಿಸಿದರು.
ಇದಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸಿರುವ ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ, ಅತಿ ಶೀಘ್ರದಲ್ಲೇ ಈ ಬಗ್ಗೆ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು