12:14 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ ಇಲಾಖೆ ಬಲೆಗೆ

17/12/2025, 10:37

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ಪ್ರಾದೇಶಿಕ ವಿಭಾಗದ ಭಾಗಮಂಡಲ ವಲಯ ಪಟ್ಟಿಘಾಟ್ ಮೀಸಲು ಅರಣ್ಯ ದಲ್ಲಿ ಅಕ್ರಮ ಬೇಟೆ ಗೆ ತೆರಳಿದ ಆರೋಪಿಗಳನ್ನು ಬಂದಿಸುವಲ್ಲಿ ಅರಣ್ಯ ಸಿಬ್ಬಂದಿ ಗಳು ಯಶಸ್ವಿ ಯಾಗಿದ್ದಾರೆ. ಕೊಡಗು ಅರಣ್ಯ ವ್ರತ್ತದ ಅರಣ್ಯ ಸಂರಕ್ಷಣಾ ಅಧಿಕಾರಿ ಸೋನಾಲು ವ್ರಶಿನಿ ಯವರಿಗೆ ಬಂದ ಖಚಿತ ಮಾಹಿತಿಯಂತೆ ಅವರ ಸೂಚನೇಯ ಮೇರೆಗೆ
ಮಡಿಕೇರಿ ಉಪ ವಿಭಾಗ ದ ಅರಣ್ಯ ಸಂರಕ್ಷಣಾ ಅಧಿಕಾರಿ ಅಭಿಷೇಕ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಸೆಂಥಿಲ್ ಕುಮಾರ್ ಮಾರ್ಗದ ರ್ಶನ ದಲ್ಲಿ ಭಾಗಮಂಡಲ ವಲಯ ಅರಣ್ಯ ಅಧಿಕಾರಿ ಶಂಕರ್ ಬಿ ಎಂ ರವರ ನಿರ್ದೇಶನದಲ್ಲಿ ಉಪ ವಲಯ ಅರಣ್ಯ ಅಧಿಕಾರಿಗಳಾದ ಸಿದ್ದಲಿಂಗಪ್ಪ ನೇತೃತ್ವ ದಲ್ಲಿ ಪಟ್ಟಿ ಘಾಟ್ ಮೀಸಲು ಅರಣ್ಯ ದಲ್ಲಿ ಅಳಿವಿನ ಅಂಚಿನಲ್ಲಿರುವ ಅಪರೂಪದ ಪ್ರಾಣಿ ಮೂಷಿಕ ಜಿಂಕೆ (ಬರಿಕ )ಬೇಟೆ ಯಾಡಿದ ಮಣಿವೇಲು ಅಲಿಯಾಸ್ ಜಾನ್ ಬೆಂಗೂರ್ ಗ್ರಾಮ, ಪ್ರಥ್ವಿನ್ ಬಿ ಡಿ ಸಿಂಗತೂರ್ ಗ್ರಾಮ, ಗಣೇಶ್ ಸಿ ಎಂ ಕೋಪಟ್ಟಿ ಗ್ರಾಮ ಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕೆ ಒಪ್ಪಿಸಲಾಗಿದ್ದು, ಬಂಧಿತರಿಂದ ಒಂಟಿ ನಳಿಗೆ ಕೋವಿ ಹತ್ತು ತೋಟಗಳು ಗುಂಡೆಟಿ ನಿಂದ ಸತ್ತ ಒಂದು ಮುಷಿಕಾ ಜಿಂಕೆ, ಕತ್ತಿ ,ಮೊಬೈಲ್ ಫೋನ್ ಸೇರಿದಂತೆ ಇತರೆ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಕಾರ್ಯಚರಣೆ ಯಲ್ಲಿ ಉಪ ವಲಯ ಅರಣ್ಯ ಅಧಿಕಾರಿಗಳಾದ ಮಂಜುನಾಥ್ ವೊಡೆಯರ್ ಸೂರ್ಯ ಎಂ ಕೆ, ಅರಣ್ಯ ರಕ್ಷಕ ರಾದ ಕೆಂಪಣ್ಣ ಮ್ಯಾಳಗೊಳ, ಸಚಿನ್ ತಳವಾರ, ರವಿ ಓಡಿ ಹಾಗು ಸಿಬ್ಬಂದಿಗಳಾದ ದೇವಿ ಪ್ರಸಾದ್ ಹಾಗೂ ಜೀವಿತ್ ಕುಮಾರ್ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು