12:44 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

Puttur | ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ವಠಾರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆ ಆರಂಭ

17/12/2025, 11:17

ಪುತ್ತೂರು(reporterkarnataka.com): ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ದೇವಾಲಯ ಸಂವರ್ಧನಾ ಸಮಿತಿಯ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಉದ್ಘಾಟನೆ ಜಲದುರ್ಗಾದೇವಿ ದೇವಸ್ಥಾನ ದಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ದೀಪೊಜ್ವಲನದ ಮೂಲಕ ಶ್ರೀನಿವಾಸ ಹೆಬ್ಬಾರ್ ಅವರು ನೆರವೇರಿಸಿದರು. ದೇವಾಲಯ ಸಂವರ್ಧನಾ ಪ್ರಮುಖ್ ಕೇಶವ ಪ್ರಸಾದ್ ಮುಳಿಯ ಅವರು ಹಿಂದೂ ಧಾರ್ಮಿಕ ಶಿಕ್ಷಣ ದ ಕುರಿತು ಪ್ರಾಸ್ತಾವಿಕ ಮಾತಾಡಿ ವಿದ್ಯಾರ್ಥಿಗಳಿಗೆ ಸುಜ್ಞಾನ ದೀಪಿಕೆ ಪುಸ್ತಕವನ್ನು ಹಸ್ತಾಂತರಿಸಿದರು.
ಅಧ್ಯಕ್ಷತೆ ವಹಿಸಿದ ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ
ಜಗನ್ನಾಥ ಪೂಜಾರಿ ಅವರು ಧಾರ್ಮಿಕ ಶಿಕ್ಷಣದ ಮಹತ್ವ ಕುರಿತು ಮಾತಾಡಿದರು.
ಕಾರ್ಯಕ್ರಮದಲ್ಲಿ ಕೇಂದ್ರದ ಸಂಯೋಜಕರಾದ ಶ್ವೇತಾ ಕಾನಾವು ಸ್ವಾಗತಿಸಿದರು. ಪೂರ್ಣಿಮಾ ಉಮೇಶ್ ವಂದಿಸಿದರು. ಕೇಂದ್ರದ ಸಂಯೋಜಕರಾದ ಅಶ್ವಿನಿ ಕೂಡಿಬೈಲು ಕಾರ್ಯಕ್ರಮ ನಿರೂಪಿಸಿದರು.


ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕರಾದ
ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ಶ್ಲೋಕದ ಅರ್ಥ ವಿವರಿಸಿ, ಭಜನೆ ಹಾಗೂ ಚಟುವಟಿಕೆ ಹೇಳಿಕೊಟ್ಟರು.
ಸಂಯೋಜಕರಾದ ಡಾ. ವಿಜಯಸರಸ್ವತಿ ಅವರು ಶ್ಲೋಕ ಅರ್ಥ ಹಾಗೂ ದೈನಂದಿನ ಜೀವನದ ಆಚಾರ ವಿಚಾರಗಳನ್ನು ವಿವರಿಸಿದರು.
ಸಂಯೋಜಕರಾದ ಶಂಕರಿ ಶರ್ಮ ಅವರು ಕಥೆ ಹಾಗೂ ಸದ್ವಿಚಾರವನ್ನು ಹೇಳಿಕೊಟ್ಟರು.
ಕಾರ್ಯಕ್ರಮದಲ್ಲಿ ಗಣ್ಯರು, ಸ್ಥಳೀಯ ಭಕ್ತಾದಿಗಳು , ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು