1:48 PM Tuesday7 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ. ಧನಂಜಯ ಸರ್ಜಿ

17/12/2025, 15:32

ಬೆಳಗಾವಿ(reporterkarnataka.com): ಕರ್ನಾಟಕ ರಾಜ್ಯದಲ್ಲಿ 229 ಇಂಜನಿಯರಿಂಗ್ ಕಾಲೇಜ್ ಗಳಿದ್ದು, ಈ ಪೈಕಿ 27 ಸರ್ಕಾರಿ ಇಂಜನಿಯರಿಂಗ್ ಕಾಲೇಜುಗಳಿವೆ. ಸರ್ಕಾರಿ ಮತ್ತು ಖಾಸಗಿ ಸೇರಿ ರಾಜ್ಯದಲ್ಲಿ ಸರಿ ಸುಮಾರು 1,53,916 ಸೀಟುಗಳು ಇದೆ. 27 ಖಾಸಗಿ ವಿಶ್ವವಿದ್ಯಾಲಯದಲ್ಲಿ 33,000 ಇಂಜನಿಯರಿಂಗ್ ಸೀಟ್ ಇದ್ರೆ, ಸರ್ಕಾರಿ ಇಂಜನಿಯರಿಂಗ್ ಕಾಲೇಜುಗಳಲ್ಲಿ ಕೇವಲ 6,495 ಸೀಟುಗಳು ಇದೆ, ಖಾಸಗಿ ಕಾಲೇಜುಗಳಿಗೆ ಹೋಲಿಸಿದರೆ ಸರ್ಕಾರಿ ಕಾಲೇಜುಗಳಲ್ಲಿ 5 ಪಟ್ಟು ಕಡಿಮೆ ಇದೆ, ಈ ತಾರತಮ್ಯ ಯಾಕೆ ಎಂದು ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಮಂಗಳವಾರ ವಿಧಾನ ಪರಿಷತ್ ನಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರಿಗೆ ಪ್ರಶ್ನೆ ಕೇಳಿದರು.
ರಾಜ್ಯದ ಒಂದು ಖಾಸಗಿ ವಿಶ್ವವಿದ್ಯಾಲಯದಲ್ಲಿ 4,320 ಇಂಜನಿಯರಿಂಗ್ ಸೀಟುಗಳು ಇದ್ರೆ ಈ ಪೈಕಿ 4.020 ಅಂದರೆ ಶೇ 90% ರಷ್ಟು ಸೀಟುಗಳು ಕೇವಲ ಕಂಪ್ಯೂಟರ್ ಸೈನ್ಸ್ ಗೆ ಸಂಬಂದಿಸಿದ ಕೋರ್ಸ್ ಗಳಿಗೆ ಮೀಸಲಿದೆ. ಇದೆ ಸರ್ಕಾರಿ ಇಂಜನಿಯರಿಂಗ್ 6,500 ಸೀಟುಗಳು ಇದ್ರೆ ಕೇವಲ 10% ಮಾತ್ರ ಕಂಪ್ಯೂಟರ್ ಸೈನ್ಸ್ ಗೆ ಸಂಬಂದಿಸಿದ ಕೋರ್ಸ್ ಗಳಿಗೆ ಇಟ್ಟಿದ್ದಾರೆ ಇದು ಯಾವ ರೀತಿ ನ್ಯಾಯ ? ಹೇಗೆ ಅನುಮತಿ ನೀಡಿದ್ದೀರಿ ?ಇದು ಹೇಗೆ ಸಾಧ್ಯ ? ಸರ್ಕಾರಿ ಇಂಜನಿಯರಿಂಗ್ ಕಾಲೇಜುಗಳಲ್ಲಿ 20 ವಿದ್ಯಾರ್ಥಿಗಳಿಗೆ ಒಬ್ಬ ಅಸಿಸ್ಟೆಂಟ್ ಪ್ರೊಫೆಸರ್ ಇದ್ರೆ ಖಾಸಗಿ ಇಂಜನಿಯರಿಂಗ್ ಕಾಲೇಜ್ ನಲ್ಲಿ 4,320 ವಿದ್ಯಾರ್ಥಿಗಳಿಗೆ 864 ಅಸಿಸ್ಟೆಂಟ್ ಪ್ರೊಫೆಸರ್, 192 ಅಸೋಸಿಯೇಟ್ ಪ್ರೊಫೆಸರ್, 96 ಪ್ರೊಫೆಸರ್ ಬೇಕು .ಇದು ಹೇಗೆ ಸಾಧ್ಯ . ಅಷ್ಟೊಂದು ಎಂ -ಟೆಕ್, ಪಿ.ಹೆಚ್.ಡಿ ಪಡೆದವರು ಎಲ್ಲಿದ್ದಾರೆ ಇದು ಸರಿಯಲ್ಲ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ದಯವಿಟ್ಟು ಈ ಪದ್ಧತಿ ಸರಿ ಪಡಿಸಿ ಎಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಸರ್ಜಿ ಅವರು ಕೇಳಿದ ಪ್ರಶ್ನೆ ವಾಸ್ತಿವಿಕವಾಗಿದೆ, ನಾನು ಒಪ್ಪುತ್ತೇನೆ. ಇತ್ತೀಚಿಗೆ ಮಾನದಂಡಗಳನ್ನು ಎ.ಐ.ಸಿ.ಟಿ.ಇ ಅವರು ಬದಲಾವಣೆ ಮಾಡಿದ್ದಾರೆ. ಹಿಂದೆ 1 : 4 ಇತ್ತು ಅಂದರೆ 4 ಜನ ವಿದ್ಯಾರ್ಥಿಗಳಿಗೆ 1 ಕಂಪ್ಯೂಟರ್ ಇತ್ತು ಈಗ ಬದಲಾವಣೆ ಮಾಡಿ 1 : 10 ಮಾಡಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಯೋಚನೆ ಮಾಡಿದ್ದೆ. ಯಥೇಚ್ಛವಾಗಿ ಸೀಟುಗಳನ್ನು ತೆಗೆದುಕೊಳ್ಳುವುದಕ್ಕೆ ನಿರ್ಬಂಧ ಹಾಕಬೇಕು ಎಂದು ತೀರ್ಮಾನ ಮಾಡಿದ್ದೇವೆ. ಎಲ್ಲೆಲ್ಲಿ ಸೀಟುಗಳು ಹೆಚ್ಚಿದೆ, ಒಂದು ವಿಷಯಕ್ಕೆ ಹೆಚ್ಚು ಸೀಟುಗಳನ್ನು ತೆಗದುಕೊಳ್ಳುವುದಕ್ಕೆ ಅಲ್ಲೇ ಅದನ್ನು ಸ್ಥಗಿತ ಮಾಡುವ ಕ್ರಮ ಕೈ ಗೊಳ್ಳುತ್ತೇವೆ ಮುಂದಿನ ದಿನಗಳಲ್ಲಿ ಆದೇಶ ಮಾಡುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು