1:59 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ. ಧನಂಜಯ ಸರ್ಜಿ

17/12/2025, 15:32

ಬೆಳಗಾವಿ(reporterkarnataka.com): ಕರ್ನಾಟಕ ರಾಜ್ಯದಲ್ಲಿ 229 ಇಂಜನಿಯರಿಂಗ್ ಕಾಲೇಜ್ ಗಳಿದ್ದು, ಈ ಪೈಕಿ 27 ಸರ್ಕಾರಿ ಇಂಜನಿಯರಿಂಗ್ ಕಾಲೇಜುಗಳಿವೆ. ಸರ್ಕಾರಿ ಮತ್ತು ಖಾಸಗಿ ಸೇರಿ ರಾಜ್ಯದಲ್ಲಿ ಸರಿ ಸುಮಾರು 1,53,916 ಸೀಟುಗಳು ಇದೆ. 27 ಖಾಸಗಿ ವಿಶ್ವವಿದ್ಯಾಲಯದಲ್ಲಿ 33,000 ಇಂಜನಿಯರಿಂಗ್ ಸೀಟ್ ಇದ್ರೆ, ಸರ್ಕಾರಿ ಇಂಜನಿಯರಿಂಗ್ ಕಾಲೇಜುಗಳಲ್ಲಿ ಕೇವಲ 6,495 ಸೀಟುಗಳು ಇದೆ, ಖಾಸಗಿ ಕಾಲೇಜುಗಳಿಗೆ ಹೋಲಿಸಿದರೆ ಸರ್ಕಾರಿ ಕಾಲೇಜುಗಳಲ್ಲಿ 5 ಪಟ್ಟು ಕಡಿಮೆ ಇದೆ, ಈ ತಾರತಮ್ಯ ಯಾಕೆ ಎಂದು ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಮಂಗಳವಾರ ವಿಧಾನ ಪರಿಷತ್ ನಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರಿಗೆ ಪ್ರಶ್ನೆ ಕೇಳಿದರು.
ರಾಜ್ಯದ ಒಂದು ಖಾಸಗಿ ವಿಶ್ವವಿದ್ಯಾಲಯದಲ್ಲಿ 4,320 ಇಂಜನಿಯರಿಂಗ್ ಸೀಟುಗಳು ಇದ್ರೆ ಈ ಪೈಕಿ 4.020 ಅಂದರೆ ಶೇ 90% ರಷ್ಟು ಸೀಟುಗಳು ಕೇವಲ ಕಂಪ್ಯೂಟರ್ ಸೈನ್ಸ್ ಗೆ ಸಂಬಂದಿಸಿದ ಕೋರ್ಸ್ ಗಳಿಗೆ ಮೀಸಲಿದೆ. ಇದೆ ಸರ್ಕಾರಿ ಇಂಜನಿಯರಿಂಗ್ 6,500 ಸೀಟುಗಳು ಇದ್ರೆ ಕೇವಲ 10% ಮಾತ್ರ ಕಂಪ್ಯೂಟರ್ ಸೈನ್ಸ್ ಗೆ ಸಂಬಂದಿಸಿದ ಕೋರ್ಸ್ ಗಳಿಗೆ ಇಟ್ಟಿದ್ದಾರೆ ಇದು ಯಾವ ರೀತಿ ನ್ಯಾಯ ? ಹೇಗೆ ಅನುಮತಿ ನೀಡಿದ್ದೀರಿ ?ಇದು ಹೇಗೆ ಸಾಧ್ಯ ? ಸರ್ಕಾರಿ ಇಂಜನಿಯರಿಂಗ್ ಕಾಲೇಜುಗಳಲ್ಲಿ 20 ವಿದ್ಯಾರ್ಥಿಗಳಿಗೆ ಒಬ್ಬ ಅಸಿಸ್ಟೆಂಟ್ ಪ್ರೊಫೆಸರ್ ಇದ್ರೆ ಖಾಸಗಿ ಇಂಜನಿಯರಿಂಗ್ ಕಾಲೇಜ್ ನಲ್ಲಿ 4,320 ವಿದ್ಯಾರ್ಥಿಗಳಿಗೆ 864 ಅಸಿಸ್ಟೆಂಟ್ ಪ್ರೊಫೆಸರ್, 192 ಅಸೋಸಿಯೇಟ್ ಪ್ರೊಫೆಸರ್, 96 ಪ್ರೊಫೆಸರ್ ಬೇಕು .ಇದು ಹೇಗೆ ಸಾಧ್ಯ . ಅಷ್ಟೊಂದು ಎಂ -ಟೆಕ್, ಪಿ.ಹೆಚ್.ಡಿ ಪಡೆದವರು ಎಲ್ಲಿದ್ದಾರೆ ಇದು ಸರಿಯಲ್ಲ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ದಯವಿಟ್ಟು ಈ ಪದ್ಧತಿ ಸರಿ ಪಡಿಸಿ ಎಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಸರ್ಜಿ ಅವರು ಕೇಳಿದ ಪ್ರಶ್ನೆ ವಾಸ್ತಿವಿಕವಾಗಿದೆ, ನಾನು ಒಪ್ಪುತ್ತೇನೆ. ಇತ್ತೀಚಿಗೆ ಮಾನದಂಡಗಳನ್ನು ಎ.ಐ.ಸಿ.ಟಿ.ಇ ಅವರು ಬದಲಾವಣೆ ಮಾಡಿದ್ದಾರೆ. ಹಿಂದೆ 1 : 4 ಇತ್ತು ಅಂದರೆ 4 ಜನ ವಿದ್ಯಾರ್ಥಿಗಳಿಗೆ 1 ಕಂಪ್ಯೂಟರ್ ಇತ್ತು ಈಗ ಬದಲಾವಣೆ ಮಾಡಿ 1 : 10 ಮಾಡಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಯೋಚನೆ ಮಾಡಿದ್ದೆ. ಯಥೇಚ್ಛವಾಗಿ ಸೀಟುಗಳನ್ನು ತೆಗೆದುಕೊಳ್ಳುವುದಕ್ಕೆ ನಿರ್ಬಂಧ ಹಾಕಬೇಕು ಎಂದು ತೀರ್ಮಾನ ಮಾಡಿದ್ದೇವೆ. ಎಲ್ಲೆಲ್ಲಿ ಸೀಟುಗಳು ಹೆಚ್ಚಿದೆ, ಒಂದು ವಿಷಯಕ್ಕೆ ಹೆಚ್ಚು ಸೀಟುಗಳನ್ನು ತೆಗದುಕೊಳ್ಳುವುದಕ್ಕೆ ಅಲ್ಲೇ ಅದನ್ನು ಸ್ಥಗಿತ ಮಾಡುವ ಕ್ರಮ ಕೈ ಗೊಳ್ಳುತ್ತೇವೆ ಮುಂದಿನ ದಿನಗಳಲ್ಲಿ ಆದೇಶ ಮಾಡುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು