3:46 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ ಬಂಧನ

17/12/2025, 15:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarmataka@gmail.com

ನಕಲಿ‌ ದಾಖಲೆ ಸೃಷ್ಠಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಆರೋಪದ ಹಿನ್ನೆಲೆಯಲ್ಲಿ ಮೂಡಿಗೆರೆ ತಹಶೀಲ್ದಾರ್ ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


ನಕಲಿ ದಾಖಲೆ ಮೂಲಕ ಅಷ್ಟು ಜಮೀನನ್ನೂ ತಮ್ಮ ಹೆಸರಿಗೆ ಖಾತೆ ಮಾಡಿಕೊಳ್ಳಲು ಯತ್ನಿಸಲಾಗಿದೆ. ಪ್ರಕರಣ ಸಂಬಂಧಿಸಿದಂತೆ ಮೂಡಿಗೆರೆ ಪೊಲೀಸರು ಮರೇಬೈಲ್ ಗ್ರಾಮದ ಮನ್ಮಥ (ನೇಮಣ್ಣಗೌಡ) ಎಂಬಾತನನ್ನು ಬಂಧಿಸಿದ್ದಾರೆ.
ಮೂಡಿಗೆರೆಯ ವಿವಿಧ ಸರ್ವೇ ನಂಬರ್ ಗಳಲ್ಲಿ 512 ಎಕರೆ 21 ಗುಂಟೆ ಕಬಳಿಸಲು ಯತ್ನ ನಡೆದಿದೆ. 512 ಎಕರೆಯನ್ನೂ ನಮ್ಮ ಪೂರ್ವಜರಾದ ಈರೇಗೌಡ ಸಾಗುವಳಿ ಮಾಡುತ್ತಿದ್ದರು. 1956ರಲ್ಲಿ ಇನಾಂ ರದ್ಧತಿ ಕಾಯ್ದೆ ಪ್ರಕಾರ ಸರ್ಕಾರಕ್ಕೆ ವಾಪಸ್ ಹೋಗಿದೆ.
1974ರಲ್ಲಿ ಈರೇಗೌಡರಿಗೆ ಹಕ್ಕು ಮರು ವರ್ಗಾವಣೆಯಾಗಿದೆ ಎಂಬ ನಕಲಿ ದಾಖಲೆ ಸೃಷ್ಟಿಸಲಾಗಿದೆ.
ಮೇಲ್ನೋಟಕ್ಕೆ ಗ್ರಾಮ ಲೆಕ್ಕಾಧಿಕಾರಿಯ ನಕಲಿ ಸಹಿ, ನಕ್ಷೆ ನಕ್ಷೆ ಮಾಡಿರುವುದು ಕಂಡು ಬಂದಿದೆ.
ಮೂಡಿಗೆರೆ ತಹಶೀಲ್ದಾರ್ ಗೆ ಪೊಲೀಸ್ ಠಾಣೆಗೆ ದೂರು ನೀಡುವಂತೆ ಎಸಿ ಸೂಚನೆ ನೀಡಿದ್ದರು. ಎಸಿ ಸೂಚನೆ ಮೇರೆಗೆ ಮೂಡಿಗೆರೆ‌ ಠಾಣೆಗೆ ತಹಶೀಲ್ದಾರ್ ದೂರು ನೀಡಿದ್ದಾರೆ.
ತಹಶೀಲ್ದಾರ್ ದೂರನನ್ವಯ ಮನ್ಮಥನನ್ನು ಪೊಲೀಸರು
ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು