9:33 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mangaluru | ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ: ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್

18/12/2025, 11:28

ಮಂಗಳೂರು(reporterkarnataka.com): ವಾಮಂಜೂರಿನ ಸಂತೋಷನಗರ ಮೈದಾನದಲ್ಲಿ ಎಸ್‌.ಜೆ.ಸಿ. ಫ್ರೆಂಡ್ಸ್ ವಾಮಂಜೂರು, ರೊ ಇಂಟರ್‌ನ್ಯಾಷನಲ್ ಹಾಗೂ ಗಜಾನನ ಕ್ರಿಕೆಟರ್ಸ್ (ಪ್ರಜ್ವಲ್ ಫಿಲ್ಮ್ಸ್) ಪ್ರಾಯೋಜಕತ್ವದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಹಂತದ ಎರಡು ದಿನಗಳ ಅಂಡರ್‌ಆರ್ಮ್ ಕ್ರಿಕೆಟ್ ಪಂದ್ಯಾಟವು ಡಿಸೆಂಬರ್ 13 ಮತ್ತು 14ರಂದು ಅತ್ಯಂತ ಯಶಸ್ವಿಯಾಗಿ ನಡೆಯಿತು.
ಈ ಪಂದ್ಯಾಟದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ವಿವಿಧ ಚರ್ಚ್‌ಗಳಿಂದ ಒಟ್ಟು 19 ತಂಡಗಳು ಭಾಗವಹಿಸಿದ್ದವು. ಅಂತಿಮ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಕ್ರಿಕೆಟ್ ತಂಡವು ಕುಡ್ಲ ಟ್ರೋಫಿಯನ್ನು ತನ್ನದಾಗಿಸಿಕೊಂಡು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಟೀಂ ಪಾಲಡ್ಕಾ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.



ಪಂದ್ಯಗಳನ್ನು ನ್ಯಾಯಸಮ್ಮತವಾಗಿ ನಡೆಸುವಲ್ಲಿ ಅಂಪೈರ್‌ಗಳು ಆಗಿ ರಾಜೇಶ್ ಪಡಿಲ್, ಸೈಫ್ ಬಜಾಲ್, ರಂಜೇಶ್ ಉಚಿಲ್, ಆರಿಫ್ ಜೋಕಟ್ಟೆ ಹಾಗೂ ಅಶ್ವತ್ ಕುಂಪಲ ಅವರು ನಿಷ್ಠೆಯಿಂದ ಹಾಗೂ ನಿಯಮಾನುಸಾರವಾಗಿ ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದರು.
ಪಂದ್ಯದ ಪ್ರತಿಯೊಂದು ಹಂತವನ್ನೂ ರೋಚಕವಾಗಿಸುವಂತೆ ರಾಜೇಶ್ ಪೆರೇರಾ ಹಾಗೂ ಸಯ್ಯಾದ್ ಗುರುಕಂಬಳ ಅವರು ಮನಮೋಹಕ ಹಾಗೂ ವಿವರವಾದ ಕಾಮೆಂಟ್ರಿ ನೀಡಿದರು. ಆಟಗಾರರು, ಆಯೋಜಕರು ಹಾಗೂ ಪ್ರೇಕ್ಷಕರ ಉತ್ತಮ ಸಹಕಾರದಿಂದ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಹಾಗೂ ಸಾರ್ಥಕವಾಗಿ ಸಂಪನ್ನವಾಯಿತು. ಕ್ರೀಡಾಭಿಮಾನಿಗಳಿಗೆ ಅನೇಕ ರೋಚಕ ಕ್ಷಣಗಳನ್ನು ನೀಡಿದ ಈ ಪಂದ್ಯಾಟವು ರೋಹನ್ ವಾಮಂಜೂರು, ಸೋಹನ್, ರೊಲ್ವಿನ್, ಮಧು, ಪ್ರಜ್ನಾ ಹಾಗೂ ಸ್ವೀಟಿ ಅವರ ಸಮರ್ಥ ಮುಂದಾಳತ್ವ ಮತ್ತು ಉತ್ತಮ ವ್ಯವಸ್ಥೆಯೊಂದಿಗೆ ಯಶಸ್ವಿಯಾಗಿ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು