3:29 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಹಸಿರು ಉಸಿರು: ಐಎಸ್ ಸಿ ಮಂಗಳೂರು ಲೀಜೆನ್ ನಿಂದ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ

14/11/2021, 18:16

ಮಂಗಳೂರು( reporterkarnataka.com):

ಇಂಡಿಯನ್ ಸೀನಿಯರ್ ಚೇಂಬರ್ ಮಂಗಳೂರು ಲೀಜೆನ್, ಮಂಗಳೂರು ಬ್ಲೂಂ ಹಾಗೂ ಲಯನ್ಸ್ ಕ್ಲಬ್ ಬಲ್ಮಠ ಇದರ ಸಂಯುಕ್ತಾಶ್ರಯದಲ್ಲಿ ನಗರದ ಅಶೋಕನಗರ ಅಂಚೆ ಕಚೇರಿಗೆ ಹಾದು ಹೋಗುವ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ ಜರುಗಿತು.

ಮುಂಜಾನೆ 7.30 ರಿಂದ 9.30ರ ವರೆಗೆ ಈ ಕಾರ್ಯಕ್ರಮ ನಡೆದಿದ್ದು 105 ಗಿಡಗಳನ್ನು ನೆಟ್ಟು ನೀರುಣಿಸಲಾಯಿತು.  

ಗಿಡ ನೆಡುವ ಕಾರ್ಯಕ್ರಮದ ಮುಂದಾಳತ್ವವನ್ನು ಇಂಡಿಯನ್ ಸೀನಿಯರ್ ಚೇಂಬರ್ ಅಧ್ಯಕ್ಷ

ಹರಿಪ್ರಸಾದ್ ರೈ  ಅವರು ವಹಿಸಿ ಎಲ್ಲರನ್ನು ಹುರಿದುಂಬಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. 85ರ ಹರೆಯದ ಪರಿಸರವಾದಿ ಕೃಷ್ಣಪ್ಪ ಅವರು 

ಅತ್ಯಂತ ಉತ್ಸಾಹದಿಂದ ಗುಂಡಿಯನ್ನು ತೋಡಿ ಗಿಡವನ್ನು ನೆಟ್ಟು ನಮಗೆಲ್ಲ ಮಾದರಿಯಾದರು. ಗಿಡ ನೆಡುವ ಯಾವುದೇ ಕಾರ್ಯಕ್ರಮವಿದ್ದರೆ ಅಲ್ಲಿ ಅವರು ಹಾಜರಾಗಿ ತಮ್ಮ ಕೈಯ್ಯಾರೆ ಗಿಡವನ್ನು ನೆಡುತ್ತಾರೆ.  ಅವರ ಈ ಉತ್ಸಾಹವನ್ನು ನೋಡಿದಾಗ ಅವರಿಗೆ ಪರಿಸರದ ಮೇಲಿನ ಕಾಳಜಿ ಅರ್ಥವಾಗುತ್ತದೆ. ಮಂಗಳೂರಿನವರಾದ ಇವರನ್ನು ಸರಕಾರವು ಗುರುತಿಸಿ ಈ ಹಿರಿ ಜೀವವನ್ನು ಗೌರವಿಸುವುದು ಅತೀ ಮುಖ್ಯ. 

ಇಂದಿನ ಈ ಕಾರ್ಯಕ್ರಮಕ್ಕೆ ಗಿರಿಜಾ ಟ್ರಸ್ಟ್‌ ನವರು ಸಹಕಾರ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು