3:50 AM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಹಸಿರು ಉಸಿರು: ಐಎಸ್ ಸಿ ಮಂಗಳೂರು ಲೀಜೆನ್ ನಿಂದ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ

14/11/2021, 18:16

ಮಂಗಳೂರು( reporterkarnataka.com):

ಇಂಡಿಯನ್ ಸೀನಿಯರ್ ಚೇಂಬರ್ ಮಂಗಳೂರು ಲೀಜೆನ್, ಮಂಗಳೂರು ಬ್ಲೂಂ ಹಾಗೂ ಲಯನ್ಸ್ ಕ್ಲಬ್ ಬಲ್ಮಠ ಇದರ ಸಂಯುಕ್ತಾಶ್ರಯದಲ್ಲಿ ನಗರದ ಅಶೋಕನಗರ ಅಂಚೆ ಕಚೇರಿಗೆ ಹಾದು ಹೋಗುವ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ ಜರುಗಿತು.

ಮುಂಜಾನೆ 7.30 ರಿಂದ 9.30ರ ವರೆಗೆ ಈ ಕಾರ್ಯಕ್ರಮ ನಡೆದಿದ್ದು 105 ಗಿಡಗಳನ್ನು ನೆಟ್ಟು ನೀರುಣಿಸಲಾಯಿತು.  

ಗಿಡ ನೆಡುವ ಕಾರ್ಯಕ್ರಮದ ಮುಂದಾಳತ್ವವನ್ನು ಇಂಡಿಯನ್ ಸೀನಿಯರ್ ಚೇಂಬರ್ ಅಧ್ಯಕ್ಷ

ಹರಿಪ್ರಸಾದ್ ರೈ  ಅವರು ವಹಿಸಿ ಎಲ್ಲರನ್ನು ಹುರಿದುಂಬಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. 85ರ ಹರೆಯದ ಪರಿಸರವಾದಿ ಕೃಷ್ಣಪ್ಪ ಅವರು 

ಅತ್ಯಂತ ಉತ್ಸಾಹದಿಂದ ಗುಂಡಿಯನ್ನು ತೋಡಿ ಗಿಡವನ್ನು ನೆಟ್ಟು ನಮಗೆಲ್ಲ ಮಾದರಿಯಾದರು. ಗಿಡ ನೆಡುವ ಯಾವುದೇ ಕಾರ್ಯಕ್ರಮವಿದ್ದರೆ ಅಲ್ಲಿ ಅವರು ಹಾಜರಾಗಿ ತಮ್ಮ ಕೈಯ್ಯಾರೆ ಗಿಡವನ್ನು ನೆಡುತ್ತಾರೆ.  ಅವರ ಈ ಉತ್ಸಾಹವನ್ನು ನೋಡಿದಾಗ ಅವರಿಗೆ ಪರಿಸರದ ಮೇಲಿನ ಕಾಳಜಿ ಅರ್ಥವಾಗುತ್ತದೆ. ಮಂಗಳೂರಿನವರಾದ ಇವರನ್ನು ಸರಕಾರವು ಗುರುತಿಸಿ ಈ ಹಿರಿ ಜೀವವನ್ನು ಗೌರವಿಸುವುದು ಅತೀ ಮುಖ್ಯ. 

ಇಂದಿನ ಈ ಕಾರ್ಯಕ್ರಮಕ್ಕೆ ಗಿರಿಜಾ ಟ್ರಸ್ಟ್‌ ನವರು ಸಹಕಾರ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು