4:02 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಹಸಿರು ಉಸಿರು: ಐಎಸ್ ಸಿ ಮಂಗಳೂರು ಲೀಜೆನ್ ನಿಂದ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ

14/11/2021, 18:16

ಮಂಗಳೂರು( reporterkarnataka.com):

ಇಂಡಿಯನ್ ಸೀನಿಯರ್ ಚೇಂಬರ್ ಮಂಗಳೂರು ಲೀಜೆನ್, ಮಂಗಳೂರು ಬ್ಲೂಂ ಹಾಗೂ ಲಯನ್ಸ್ ಕ್ಲಬ್ ಬಲ್ಮಠ ಇದರ ಸಂಯುಕ್ತಾಶ್ರಯದಲ್ಲಿ ನಗರದ ಅಶೋಕನಗರ ಅಂಚೆ ಕಚೇರಿಗೆ ಹಾದು ಹೋಗುವ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ ಜರುಗಿತು.

ಮುಂಜಾನೆ 7.30 ರಿಂದ 9.30ರ ವರೆಗೆ ಈ ಕಾರ್ಯಕ್ರಮ ನಡೆದಿದ್ದು 105 ಗಿಡಗಳನ್ನು ನೆಟ್ಟು ನೀರುಣಿಸಲಾಯಿತು.  

ಗಿಡ ನೆಡುವ ಕಾರ್ಯಕ್ರಮದ ಮುಂದಾಳತ್ವವನ್ನು ಇಂಡಿಯನ್ ಸೀನಿಯರ್ ಚೇಂಬರ್ ಅಧ್ಯಕ್ಷ

ಹರಿಪ್ರಸಾದ್ ರೈ  ಅವರು ವಹಿಸಿ ಎಲ್ಲರನ್ನು ಹುರಿದುಂಬಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. 85ರ ಹರೆಯದ ಪರಿಸರವಾದಿ ಕೃಷ್ಣಪ್ಪ ಅವರು 

ಅತ್ಯಂತ ಉತ್ಸಾಹದಿಂದ ಗುಂಡಿಯನ್ನು ತೋಡಿ ಗಿಡವನ್ನು ನೆಟ್ಟು ನಮಗೆಲ್ಲ ಮಾದರಿಯಾದರು. ಗಿಡ ನೆಡುವ ಯಾವುದೇ ಕಾರ್ಯಕ್ರಮವಿದ್ದರೆ ಅಲ್ಲಿ ಅವರು ಹಾಜರಾಗಿ ತಮ್ಮ ಕೈಯ್ಯಾರೆ ಗಿಡವನ್ನು ನೆಡುತ್ತಾರೆ.  ಅವರ ಈ ಉತ್ಸಾಹವನ್ನು ನೋಡಿದಾಗ ಅವರಿಗೆ ಪರಿಸರದ ಮೇಲಿನ ಕಾಳಜಿ ಅರ್ಥವಾಗುತ್ತದೆ. ಮಂಗಳೂರಿನವರಾದ ಇವರನ್ನು ಸರಕಾರವು ಗುರುತಿಸಿ ಈ ಹಿರಿ ಜೀವವನ್ನು ಗೌರವಿಸುವುದು ಅತೀ ಮುಖ್ಯ. 

ಇಂದಿನ ಈ ಕಾರ್ಯಕ್ರಮಕ್ಕೆ ಗಿರಿಜಾ ಟ್ರಸ್ಟ್‌ ನವರು ಸಹಕಾರ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು