11:51 AM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..!

29/11/2025, 17:29

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ತಾಲ್ಲೂಕಿನ ಕಲ್ಲಳ್ಳಿಯಲ್ಲಿ ವಿಳಾಸ ಕೇಳುವ ನೆಪದಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರ ಕತ್ತಿನಿಂದ ಚಿನ್ನದ ಸರ ಏಗರಿಸಿದ ಘಟನೆ ನಡೆದಿದೆ. ಮಹಿಳೆ ಬಳಿ ಮಲ್ಲಳ್ಳಿ ಜಲಪಾತಕ್ಕೆ ತೆರಳುವ ದಾರಿ ವಿಚಾರಿಸಿದ ಬೈಕ್ ಸವಾರ ಕ್ಷಣ ಮಾತ್ರದಲ್ಲಿ 25 ಗ್ರಾಂ ಚಿನ್ನದ ಸರ ಏಗರಿಸಿ ತಂಬಲಗೇರಿ ರಸ್ತೆ ಕಡೆ ತೆರಳಿದ್ದಾನೆ.
ಘಟನೆ ಬಳಿಕ ಸೋಮವಾರಪೇಟೆ ಪೊಲೀಸರು ಬಿಸಲೆ ಮತ್ತು ಚಂಗಡಹಳ್ಳಿಯ ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಕಾರ್ಯಾಚರಣೆ ವೇಳೆ ಸೋಮವಾರಪೇಟೆ ತಾಲ್ಲೂಕಿನ ದೊಡ್ಡತೊಳೂರು ಗ್ರಾಮದ ಆದರ್ಶ್ ನನ್ನು ಬಂಧಿಸಲಾಗಿದೆ. ಆದರ್ಶ್ ಮಂಗಳೂರಿನಲ್ಲಿ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದು, ರಜೆಯ ಮೇಲೆ ಊರಿಗೆ ಬಂದು ಈ ಕೃತ್ಯ ನಡೆಸಿದ್ದಾನೆ. ಕಳುವು ಮಾಡಿದ ಸರವನ್ನು ಹಾಸನದಲ್ಲಿ ಅಡವು ಇಟ್ಟು ಹಣ ಪಡೆದಿದ್ದ, ಸದ್ಯ ಸರವನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು