3:54 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಬಾಳೇಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ನಾಳೆ ಅದ್ದೂರಿ ದೀಪೋತ್ಸವ

21/11/2025, 19:05

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಪ್ರಸಿದ್ಧ ಐತಿಹಾಸಿಕ ದೇಗುಲವಾಗಿರುವ ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ನಾಳೆ
ಕಾರ್ತಿಕ ದೀಪೋತ್ಸವದ ಪ್ರಯುಕ್ತ 33ನೇ ವರ್ಷದ
ದೀಪೋತ್ಸವ ಅತ್ಯಂತ ವೈಭವದಿಂದ ನಡೆಯಲಿದೆ.
ಸುಮಾರು 1000 ಅಡಿ ಬೆಟ್ಟದ ಮೇಲಿರುವ ದೇಗುಲಕ್ಕೆ
ಸಾವಿರಾರು ಭಕ್ತರು ಆಗಮಿಸಲಿದ್ದು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

*ಪೂಜೆ, ದೀಪೋತ್ಸವ, ಅನ್ನ ಸಂತರ್ಪಣೆ !:*
ನಾಳೆ ಸಂಜೆ ಸ್ವಾಮಿಗೆ ರುದ್ರಭಿಷೇಕ, ವಿಶೇಷ ಅಲಂಕಾರ
ನಂತರ ಸಿದ್ದೇಶ್ವರ ಸ್ವಾಮಿಗೆ ಪೂಜೆ, ದೀಪೋತ್ಸವ ನೆಡೆಯಲಿದೆ ಹಾಗೂ ಆರೂಢ ಪ್ರಶ್ನೆಯಲ್ಲಿ ಬಂದಂತೆ ಅಗಸ್ತ್ಯ ಮಹರ್ಷಿಗಳು ತಪಗೈದ ಸ್ಥಳವಾದ್ದರಿಂದ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ಅಗಸ್ತ್ಯ ಮಹರ್ಷಿಗಳ ಗುರುಪೀಠ ಪೂಜೆ ನಡೆಯಲಿದೆ. ನಂತರ ಬಂದಿರುವ ಎಲ್ಲಾ ಭಕ್ತಾದಿಗಳಿಗೂ ಅನ್ನ ಸಂತರ್ಪಣೆ ನೆಡೆಯಲಿದೆ. ಆ ನಂತರ ವಿದ್ವಾನ್ ರಾಘವೇಂದ್ರ ಹೆಗ್ಗೋಡು ಮತ್ತು ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ನ. 23ರ ಸಂಜೆ 6:30ಕ್ಕೆ ಡ್ಯಾನ್ಸ್ ಪ್ಯಾಲೇಸ್ ತೀರ್ಥಹಳ್ಳಿ ಇವರ ಸಹಯೋಗದಲ್ಲಿ ಸಿದ್ದೇಶ್ವರ ಬೆಟ್ಟದ ತೆಪ್ಪಲಿನಲ್ಲಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ನಡೆಯಲಿದೆ.
ನಿಸರ್ಗ ಮಾತೆಯ ಮುಡಿಯಲ್ಲಿರುವ ಸಿದ್ದೇಶ್ವರ ಬೆಟ್ಟದ
ತುದಿಯವರೆಗೆ ಜಗಮಗಿಸುವ ವಿದ್ಯುತ್ ದೀಪಾಲಂಕಾರ, ಸಿಡಿ ಮದ್ದಿನ ಜೇಂಕಾರದೊಂದಿಗೆ ಸ್ವಾಮಿಯ ದೀಪೋತ್ಸವ ವೀಕ್ಷಿಸಿ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಲು ಸಮಿತಿಯವರು ಈ ಮೂಲಕ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು