9:14 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಬಾಳೇಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ನಾಳೆ ಅದ್ದೂರಿ ದೀಪೋತ್ಸವ

21/11/2025, 19:05

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಪ್ರಸಿದ್ಧ ಐತಿಹಾಸಿಕ ದೇಗುಲವಾಗಿರುವ ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ನಾಳೆ
ಕಾರ್ತಿಕ ದೀಪೋತ್ಸವದ ಪ್ರಯುಕ್ತ 33ನೇ ವರ್ಷದ
ದೀಪೋತ್ಸವ ಅತ್ಯಂತ ವೈಭವದಿಂದ ನಡೆಯಲಿದೆ.
ಸುಮಾರು 1000 ಅಡಿ ಬೆಟ್ಟದ ಮೇಲಿರುವ ದೇಗುಲಕ್ಕೆ
ಸಾವಿರಾರು ಭಕ್ತರು ಆಗಮಿಸಲಿದ್ದು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

*ಪೂಜೆ, ದೀಪೋತ್ಸವ, ಅನ್ನ ಸಂತರ್ಪಣೆ !:*
ನಾಳೆ ಸಂಜೆ ಸ್ವಾಮಿಗೆ ರುದ್ರಭಿಷೇಕ, ವಿಶೇಷ ಅಲಂಕಾರ
ನಂತರ ಸಿದ್ದೇಶ್ವರ ಸ್ವಾಮಿಗೆ ಪೂಜೆ, ದೀಪೋತ್ಸವ ನೆಡೆಯಲಿದೆ ಹಾಗೂ ಆರೂಢ ಪ್ರಶ್ನೆಯಲ್ಲಿ ಬಂದಂತೆ ಅಗಸ್ತ್ಯ ಮಹರ್ಷಿಗಳು ತಪಗೈದ ಸ್ಥಳವಾದ್ದರಿಂದ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ಅಗಸ್ತ್ಯ ಮಹರ್ಷಿಗಳ ಗುರುಪೀಠ ಪೂಜೆ ನಡೆಯಲಿದೆ. ನಂತರ ಬಂದಿರುವ ಎಲ್ಲಾ ಭಕ್ತಾದಿಗಳಿಗೂ ಅನ್ನ ಸಂತರ್ಪಣೆ ನೆಡೆಯಲಿದೆ. ಆ ನಂತರ ವಿದ್ವಾನ್ ರಾಘವೇಂದ್ರ ಹೆಗ್ಗೋಡು ಮತ್ತು ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ನ. 23ರ ಸಂಜೆ 6:30ಕ್ಕೆ ಡ್ಯಾನ್ಸ್ ಪ್ಯಾಲೇಸ್ ತೀರ್ಥಹಳ್ಳಿ ಇವರ ಸಹಯೋಗದಲ್ಲಿ ಸಿದ್ದೇಶ್ವರ ಬೆಟ್ಟದ ತೆಪ್ಪಲಿನಲ್ಲಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ನಡೆಯಲಿದೆ.
ನಿಸರ್ಗ ಮಾತೆಯ ಮುಡಿಯಲ್ಲಿರುವ ಸಿದ್ದೇಶ್ವರ ಬೆಟ್ಟದ
ತುದಿಯವರೆಗೆ ಜಗಮಗಿಸುವ ವಿದ್ಯುತ್ ದೀಪಾಲಂಕಾರ, ಸಿಡಿ ಮದ್ದಿನ ಜೇಂಕಾರದೊಂದಿಗೆ ಸ್ವಾಮಿಯ ದೀಪೋತ್ಸವ ವೀಕ್ಷಿಸಿ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಲು ಸಮಿತಿಯವರು ಈ ಮೂಲಕ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು