7:05 PM Tuesday7 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ ರಿಸೆಪ್ಶನ್

07/04/2026, 19:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಬಹುಭಾಷ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಜೋಡಿಯು ಕೊಡಗಿನ ವಿರಾಜಪೇಟೆಯಲ್ಲಿ ಅದ್ಧೂರಿ ಆರತಕ್ಷತೆ ಸಮಾರಂಭವನ್ನು ಆಯೋಜಿಸಿದೆ. ರಾಜಸ್ಥಾನದಲ್ಲಿ ನಡೆದ ಖಾಸಗಿ ವಿವಾಹದ ನಂತರ, ಮಂದಣ್ಣ ಕುಟುಂಬದ ಆಪ್ತರಿಗಾಗಿ ಕೊಡವ ಸಂಪ್ರದಾಯದೊಂದಿಗೆ ಈ ವಿಶೇಷ ರಿಸೆಪ್ಷನ್ ನಡೆಸಲಾಯಿತು. ವಿರಾಜಪೇಟೆಯ ಸುಂದರ ಪರಿಸರದಲ್ಲಿರುವ ‘ಸಿರಿನಿಟಿ ಹಾಲ್’ ನಲ್ಲಿ ಈ ತಾರಾ ಜೋಡಿಯ ರಿಸೆಪ್ಷನ್‌ಗೆ ಸಾಕ್ಷಿಯಾಗಿದೆ. ಕೊಡವ ಸಂಪ್ರದಾಯದ ಕೆಲವು ಮೆರುಗುಗಳೊಂದಿಗೆ ಈ ಸಮಾರಂಭ ನಡೆದಿದ್ದು, ಮಂದಣ್ಣ ಕುಟುಂಬಸ್ಥರು ತಮ್ಮ ಮನೆಮಗಳ ಮದುವೆಯ ಸಂಭ್ರಮವನ್ನು ಸಡಗರದಿಂದ ಆಚರಿಸಿದ್ದಾರೆ. ಸಭಾಂಗಣದ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.


ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ವಿವಾಹವು ರಾಜಸ್ಥಾನದ ಉದಯಪುರದಲ್ಲಿ ಗೌಪ್ಯ ವಾಗಿ ಸದ್ದಿಲ್ಲದೆ ನಡೆದ ಬೆನ್ನಲ್ಲೇ ಕೊಡಗಿನ ಅನೇಕ ಸಂಬಂಧಿಕರಿಗೆ ಹೋಗಲು ಸಾಧ್ಯವಾಗಿರದ ಕಾರಣ. ಮಂದಣ್ಣ ಕುಟುಂಬದವರು ತಮ್ಮ ಜಿಲ್ಲೆಯ ಹಾಗೂ ರಾಜ್ಯದ ಆಪ್ತರಿಗಾಗಿ ಮತ್ತು ಮಂದಣ್ಣ ಕುಟುಂಬದ ದೊಡ್ಡ ಬಳಗಕ್ಕಾಗಿ ಈ ವಿಶೇಷ ರಿಸೆಪ್ಷನ್ ಏರ್ಪಡಿಸಿದ್ದಾರೆ. ಮದುವೆಯಾಗಿ ಒಂದೂವರೆ ತಿಂಗಳ ನಂತರ ಈ ಕಾರ್ಯಕ್ರಮ ನಡೆಯುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು