10:18 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಾಜಸ್ಥಾನದ ಬಿಕಾನೇರ್ ನಲ್ಲಿ ಕರ್ತವ್ಯದಲ್ಲಿದ್ದ ಕಾಫಿನಾಡ ಯೋಧ ಸಾವು

10/12/2025, 14:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜಸ್ಥಾನದ ಬಿಕಾನೇರ್ ನಲ್ಲಿ ಸೇವೆನಿರತ ಕಾಫಿನಾಡ ಯೋಧ ಸಾವನ್ನಪ್ಪಿದ್ದಾರೆ.
ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ಯೋಧ ಕಡೂರಿನ ಗಿರೀಶ್ (37) ಆಗಿದ್ದಾರೆ. ಗಿರೀಶ್ ಅವರು ಗಡಿ ಭದ್ರತಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೈನಿಕ. ಕಡೂರು ತಾಲೂಕಿನ ಜೋಡಿ ತಿಮ್ಮಾಪುರದವರು. ವಾಂತಿಯಾದ ಕಾರಣ ವಿಶ್ರಾಂತಿಗೆ ಗಿರೀಶ್ ತೆರಳಿದ್ದರು.

ಮನೆಯವರಿಗೆ ವಿಡಿಯೋ ಕಾಲ್ ಮಾಡಿ ಚೆನ್ನಾಗಿದ್ದೇನೆ, ನಾಳೆ ಆಸ್ಪತ್ರೆಗೆ ಹೋಗ್ತೀನಿ ಎಂದಿದ್ದರು. ನಿನ್ನೆ ಗಿರೀಶ್ ಸಾವನ್ನಪ್ಪಿರುವ ಬಗ್ಗೆ ಕುಟುಂಬಸ್ಥರಿಗೆ ಸೇನೆ ಮಾಹಿತಿ ನೀಡಿದೆ. ಯೋಧ ಗಿರೀಶ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.15 ದಿನಗಳ ಹಿಂದಷ್ಟೆ ಊರಿಂದ ಸೇನೆಗೆ ತೆರಳಿದ್ದರು. ಕಳೆದ 18 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು