7:12 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ರಾಜಸ್ಥಾನದ ಬಿಕಾನೇರ್ ನಲ್ಲಿ ಕರ್ತವ್ಯದಲ್ಲಿದ್ದ ಕಾಫಿನಾಡ ಯೋಧ ಸಾವು

10/12/2025, 14:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜಸ್ಥಾನದ ಬಿಕಾನೇರ್ ನಲ್ಲಿ ಸೇವೆನಿರತ ಕಾಫಿನಾಡ ಯೋಧ ಸಾವನ್ನಪ್ಪಿದ್ದಾರೆ.
ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ಯೋಧ ಕಡೂರಿನ ಗಿರೀಶ್ (37) ಆಗಿದ್ದಾರೆ. ಗಿರೀಶ್ ಅವರು ಗಡಿ ಭದ್ರತಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೈನಿಕ. ಕಡೂರು ತಾಲೂಕಿನ ಜೋಡಿ ತಿಮ್ಮಾಪುರದವರು. ವಾಂತಿಯಾದ ಕಾರಣ ವಿಶ್ರಾಂತಿಗೆ ಗಿರೀಶ್ ತೆರಳಿದ್ದರು.

ಮನೆಯವರಿಗೆ ವಿಡಿಯೋ ಕಾಲ್ ಮಾಡಿ ಚೆನ್ನಾಗಿದ್ದೇನೆ, ನಾಳೆ ಆಸ್ಪತ್ರೆಗೆ ಹೋಗ್ತೀನಿ ಎಂದಿದ್ದರು. ನಿನ್ನೆ ಗಿರೀಶ್ ಸಾವನ್ನಪ್ಪಿರುವ ಬಗ್ಗೆ ಕುಟುಂಬಸ್ಥರಿಗೆ ಸೇನೆ ಮಾಹಿತಿ ನೀಡಿದೆ. ಯೋಧ ಗಿರೀಶ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.15 ದಿನಗಳ ಹಿಂದಷ್ಟೆ ಊರಿಂದ ಸೇನೆಗೆ ತೆರಳಿದ್ದರು. ಕಳೆದ 18 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು