6:28 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಒಂಟಿ ಸಲಗ!: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

14/03/2025, 19:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ರಾತ್ರಿ ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಿರುವ ನಲ್ಲೂರಿನಲ್ಲಿ ಒಂಟಿ ಸಲಗ ತಿರುಗಾಡಿದ ಘಟನೆ ಆತಂಕಕ್ಕೆ ಕಾರಣವಾಗಿದೆ.
ನಗರದಿಂದ ಕೇವಲ 2 ಕಿಮೀ ದೂರದಲ್ಲಿಯೇ ಈ ಸಲಗ ಕಂಡು ಬಂದಿದ್ದು, ಇದು ನಗರ ಪ್ರದೇಶಕ್ಕೆ ಪ್ರವೇಶಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ.
ಸಿಸಿಟಿವಿಯಲ್ಲಿ ಸೆರೆ ನಲ್ಲೂರಿನ ವಿವಿಧ ರಸ್ತೆಗಳಲ್ಲೂ ಆನೆ ಸಂಚರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದು, ಮನೆಯಿಂದ ಹೊರಬರಲು ಹಿಂಜರಿದಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳ ಹರಸಾಹಸ ಸಲಗವನ್ನು ಕಾಡು ಪ್ರದೇಶಕ್ಕೆ ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಅದನ್ನು ಸುರಕ್ಷಿತವಾಗಿ ಮರಳಿಸಲು ತಕ್ಕ ಮುನ್ನೆಚ್ಚರಿಕೆ ವಹಿಸಲಾಗಿದೆ.
ಸ್ಥಳೀಯರಲ್ಲಿ ಆತಂಕ ಹಠಾತ್ ಆನೆಯ ದರ್ಶನವಾದ ಹಿನ್ನೆಲೆಯಲ್ಲಿ ನಲ್ಲೂರಿನ ನಿವಾಸಿಗಳು ಆತಂಕಗೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು