3:26 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಹೊಸ ಸಚಿವ ಸಂಪುಟವೂ ರಚನೆಯಾಗಬಹುದು: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

10/10/2025, 22:27

ಮಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸಚಿವ ಸಂಪುಟ ಪುನರ್ರಚನೆ ಯಾವಾಗ ಬೇಕಾದರೂ ಆಗಬಹುದು ಅಥವಾ ಹೊಸ ಸಚಿವ ಸಂಪುಟವೂ ಆಗಬಹುದು. ಆದರೆ, ಈ ಬಗ್ಗೆ ಮುಖ್ಯಮಂತ್ರಿ ಏನನ್ನೂ ಹೇಳಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮವಾರ ಔತಣ ಕೂಟಕ್ಕೆ ಕರೆದಿದ್ದಾರೆ. ನನ್ನನ್ನೂ ಬರಬೇಕು ಎಂದು ಕರೆದಿದ್ದಾರೆ. ಅಲ್ಲಿ ಏನಾಗುತ್ತೋ ನೋಡೋಣ ಎಂದರು.
ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಈಗಾಗಲೇ ಸ್ಪಷ್ಟವಾಗಿ ಹೇಳಿದೆ. ಈಗ ಮುಖ್ಯಮಂತ್ರಿ ಇದ್ದಾರೆ. ಪಕ್ಷದ ಹೈಕಮಾಂಡ್, ಹಿರಿಯ ಮುಖಂಡರು ನಿರ್ಧಾರ ಕೈಗೊಳ್ಳಲಿದ್ದಾರೆ. ಅವರ ತೀರ್ಮಾನ ಅಂತಿಮ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡ ನಾಯಕ ಹಾಗೂ ಜನಪ್ರಿಯ ನಾಯಕ ಎಂದರು.
ಡಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್
ಕುಮಾರ್ ಅವರು ದೀರ್ಘಕಾಲದಿಂದ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿದ್ದು, ಪ್ರಸ್ತುತ ಮೆಸ್ಕಾಂ ಅಧ್ಯಕ್ಷರಾಗಿದ್ದಾರೆ. ಈ ಬಗ್ಗೆ ಪಕ್ಷದ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಯಾವುದೇ ಹಸ್ತಕ್ಷೇಪ ಇಲ್ಲದೆ, ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿದೆ. ಯಾವುದೇ ಒತ್ತಡಕ್ಕೆ ಮಣಿಯಬೇಕಿಲ್ಲ. ನನಗೆ ಎಸ್‌ಐಟಿ ಬಗ್ಗೆ ಪೂರ್ತಿ ವಿಶ್ವಾಸವಿದೆ. ನನಗಿರುವ ಮಾಹಿತಿಯಂತೆ ಸ್ವಲ್ಪಮಟ್ಟಿನ ಷಡ್ಯಂತ್ರ ನಡೆದಿದೆ. ಈ ಬಗ್ಗೆ ಯಾವ ಸಾಕ್ಷ್ಯ ಇದೆ ಎಂಬುದನ್ನು ಎಸ್‌ಐಟಿ ಹೇಳಬೇಕಿದೆ. ಅಗತ್ಯವಿದ್ದರೆ ಎಸ್‌ಐಟಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು