8:33 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಹೊಸ ಸಚಿವ ಸಂಪುಟವೂ ರಚನೆಯಾಗಬಹುದು: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

10/10/2025, 22:27

ಮಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸಚಿವ ಸಂಪುಟ ಪುನರ್ರಚನೆ ಯಾವಾಗ ಬೇಕಾದರೂ ಆಗಬಹುದು ಅಥವಾ ಹೊಸ ಸಚಿವ ಸಂಪುಟವೂ ಆಗಬಹುದು. ಆದರೆ, ಈ ಬಗ್ಗೆ ಮುಖ್ಯಮಂತ್ರಿ ಏನನ್ನೂ ಹೇಳಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮವಾರ ಔತಣ ಕೂಟಕ್ಕೆ ಕರೆದಿದ್ದಾರೆ. ನನ್ನನ್ನೂ ಬರಬೇಕು ಎಂದು ಕರೆದಿದ್ದಾರೆ. ಅಲ್ಲಿ ಏನಾಗುತ್ತೋ ನೋಡೋಣ ಎಂದರು.
ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಈಗಾಗಲೇ ಸ್ಪಷ್ಟವಾಗಿ ಹೇಳಿದೆ. ಈಗ ಮುಖ್ಯಮಂತ್ರಿ ಇದ್ದಾರೆ. ಪಕ್ಷದ ಹೈಕಮಾಂಡ್, ಹಿರಿಯ ಮುಖಂಡರು ನಿರ್ಧಾರ ಕೈಗೊಳ್ಳಲಿದ್ದಾರೆ. ಅವರ ತೀರ್ಮಾನ ಅಂತಿಮ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡ ನಾಯಕ ಹಾಗೂ ಜನಪ್ರಿಯ ನಾಯಕ ಎಂದರು.
ಡಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್
ಕುಮಾರ್ ಅವರು ದೀರ್ಘಕಾಲದಿಂದ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿದ್ದು, ಪ್ರಸ್ತುತ ಮೆಸ್ಕಾಂ ಅಧ್ಯಕ್ಷರಾಗಿದ್ದಾರೆ. ಈ ಬಗ್ಗೆ ಪಕ್ಷದ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಯಾವುದೇ ಹಸ್ತಕ್ಷೇಪ ಇಲ್ಲದೆ, ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿದೆ. ಯಾವುದೇ ಒತ್ತಡಕ್ಕೆ ಮಣಿಯಬೇಕಿಲ್ಲ. ನನಗೆ ಎಸ್‌ಐಟಿ ಬಗ್ಗೆ ಪೂರ್ತಿ ವಿಶ್ವಾಸವಿದೆ. ನನಗಿರುವ ಮಾಹಿತಿಯಂತೆ ಸ್ವಲ್ಪಮಟ್ಟಿನ ಷಡ್ಯಂತ್ರ ನಡೆದಿದೆ. ಈ ಬಗ್ಗೆ ಯಾವ ಸಾಕ್ಷ್ಯ ಇದೆ ಎಂಬುದನ್ನು ಎಸ್‌ಐಟಿ ಹೇಳಬೇಕಿದೆ. ಅಗತ್ಯವಿದ್ದರೆ ಎಸ್‌ಐಟಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು