8:01 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ ಸಂಚಾರಕ್ಕೆ ಅಡಚಣೆ

23/11/2025, 17:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕರ್ನಾಟಕ ಕೇರಳ ರಾಜ್ಯ ಹೆದ್ದಾರಿ, ವಿರಾಜಪೇಟೆ ತಾಲ್ಲೂಕಿನ ಪೆರುಂಬಾಡಿ ಗೇಟಿನಿಂದ 15 ಕಿಲೋಮೀಟರ್ ದೂರದ ರಕ್ಷಿತಾ ಅರಣ್ಯದ ನಡುವೆ ಹಾದು ಹೋಗುವ ಮುಖ್ಯರಸ್ತೆಯಲ್ಲಿ ನಿನ್ನೆ ರಾತ್ರಿ ಸರಕು ತುಂಬಿದ ಲಾರಿ ಒಂದು ರಸ್ತೆಗೆ ಮಗುಚಿ ಇರುವ ಘಟನೆ ನಡೆದಿದೆ.
ಘಟನೆಯಿಂದ ಯಾವುದೇ ಪ್ರಾಣ ಹಾನಿ ಆಗಿರುವುದಿಲ್ಲ. ಮಾಕುಟ್ಟ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಳೆದ ಒಂದುವರೆ ತಿಂಗಳ ಹಿಂದೆ ಲೋಕೋಪಯೋಗಿ ಸಚಿವರು ಈ ರಸ್ತೆಯ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು. ಆದರೆ ಈ ರಸ್ತೆಯಲ್ಲಿ ಈ ಹಿಂದೆ ಶೇಖರಿಸಿ ಇಡಲಾದ ಜಲ್ಲಿಕಲ್ಲುಗಳು ಮಾತ್ರ ಕಾಣುತ್ತಿದ್ದು ರಸ್ತೆ ಕಾಮಗಾರಿ ಆರಂಭಗೊಂಡಿಲ್ಲ. ಇಲ್ಲಿ ಸಂಚರಿಸುವ ಭಾರಿ ವಾಹನಗಳು ಸಂಕಟ ಎದುರಿಸುತ್ತಿವೆ.ಪೆರುoಬಾಡಿಯಿಂದ 22 km ದೂರದ ಮಾಕುಟ್ಟ ಗೇಟ್ ತಲುಪಲು ಇದೀಗ ಎರಡು ತಾಸು ಸಮಯ ಬೇಕಾಗಿದೆ. ಒಂದೆಡೆ ಸರ್ಕಾರ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದರು ಕಾಮಗಾರಿ ಮಾತ್ರ ಆರಂಭಗೊಂಡಿಲ್ಲ. ಸದ್ಯಕ್ಕೆ ಗುಳಿ ಮುಚ್ಚುವ ಕಾರ್ಯವಾದರೂ ನಡೆಸಬಹುದಿತ್ತಲ್ಲ ಎಂಬುದು ಇಲ್ಲಿ ಸಂಚರಿಸುವವರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು