4:32 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ ಸಂಚಾರಕ್ಕೆ ಅಡಚಣೆ

23/11/2025, 17:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕರ್ನಾಟಕ ಕೇರಳ ರಾಜ್ಯ ಹೆದ್ದಾರಿ, ವಿರಾಜಪೇಟೆ ತಾಲ್ಲೂಕಿನ ಪೆರುಂಬಾಡಿ ಗೇಟಿನಿಂದ 15 ಕಿಲೋಮೀಟರ್ ದೂರದ ರಕ್ಷಿತಾ ಅರಣ್ಯದ ನಡುವೆ ಹಾದು ಹೋಗುವ ಮುಖ್ಯರಸ್ತೆಯಲ್ಲಿ ನಿನ್ನೆ ರಾತ್ರಿ ಸರಕು ತುಂಬಿದ ಲಾರಿ ಒಂದು ರಸ್ತೆಗೆ ಮಗುಚಿ ಇರುವ ಘಟನೆ ನಡೆದಿದೆ.
ಘಟನೆಯಿಂದ ಯಾವುದೇ ಪ್ರಾಣ ಹಾನಿ ಆಗಿರುವುದಿಲ್ಲ. ಮಾಕುಟ್ಟ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಳೆದ ಒಂದುವರೆ ತಿಂಗಳ ಹಿಂದೆ ಲೋಕೋಪಯೋಗಿ ಸಚಿವರು ಈ ರಸ್ತೆಯ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು. ಆದರೆ ಈ ರಸ್ತೆಯಲ್ಲಿ ಈ ಹಿಂದೆ ಶೇಖರಿಸಿ ಇಡಲಾದ ಜಲ್ಲಿಕಲ್ಲುಗಳು ಮಾತ್ರ ಕಾಣುತ್ತಿದ್ದು ರಸ್ತೆ ಕಾಮಗಾರಿ ಆರಂಭಗೊಂಡಿಲ್ಲ. ಇಲ್ಲಿ ಸಂಚರಿಸುವ ಭಾರಿ ವಾಹನಗಳು ಸಂಕಟ ಎದುರಿಸುತ್ತಿವೆ.ಪೆರುoಬಾಡಿಯಿಂದ 22 km ದೂರದ ಮಾಕುಟ್ಟ ಗೇಟ್ ತಲುಪಲು ಇದೀಗ ಎರಡು ತಾಸು ಸಮಯ ಬೇಕಾಗಿದೆ. ಒಂದೆಡೆ ಸರ್ಕಾರ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದರು ಕಾಮಗಾರಿ ಮಾತ್ರ ಆರಂಭಗೊಂಡಿಲ್ಲ. ಸದ್ಯಕ್ಕೆ ಗುಳಿ ಮುಚ್ಚುವ ಕಾರ್ಯವಾದರೂ ನಡೆಸಬಹುದಿತ್ತಲ್ಲ ಎಂಬುದು ಇಲ್ಲಿ ಸಂಚರಿಸುವವರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು