7:38 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ ಸಂಚಾರಕ್ಕೆ ಅಡಚಣೆ

23/11/2025, 17:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕರ್ನಾಟಕ ಕೇರಳ ರಾಜ್ಯ ಹೆದ್ದಾರಿ, ವಿರಾಜಪೇಟೆ ತಾಲ್ಲೂಕಿನ ಪೆರುಂಬಾಡಿ ಗೇಟಿನಿಂದ 15 ಕಿಲೋಮೀಟರ್ ದೂರದ ರಕ್ಷಿತಾ ಅರಣ್ಯದ ನಡುವೆ ಹಾದು ಹೋಗುವ ಮುಖ್ಯರಸ್ತೆಯಲ್ಲಿ ನಿನ್ನೆ ರಾತ್ರಿ ಸರಕು ತುಂಬಿದ ಲಾರಿ ಒಂದು ರಸ್ತೆಗೆ ಮಗುಚಿ ಇರುವ ಘಟನೆ ನಡೆದಿದೆ.
ಘಟನೆಯಿಂದ ಯಾವುದೇ ಪ್ರಾಣ ಹಾನಿ ಆಗಿರುವುದಿಲ್ಲ. ಮಾಕುಟ್ಟ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಳೆದ ಒಂದುವರೆ ತಿಂಗಳ ಹಿಂದೆ ಲೋಕೋಪಯೋಗಿ ಸಚಿವರು ಈ ರಸ್ತೆಯ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು. ಆದರೆ ಈ ರಸ್ತೆಯಲ್ಲಿ ಈ ಹಿಂದೆ ಶೇಖರಿಸಿ ಇಡಲಾದ ಜಲ್ಲಿಕಲ್ಲುಗಳು ಮಾತ್ರ ಕಾಣುತ್ತಿದ್ದು ರಸ್ತೆ ಕಾಮಗಾರಿ ಆರಂಭಗೊಂಡಿಲ್ಲ. ಇಲ್ಲಿ ಸಂಚರಿಸುವ ಭಾರಿ ವಾಹನಗಳು ಸಂಕಟ ಎದುರಿಸುತ್ತಿವೆ.ಪೆರುoಬಾಡಿಯಿಂದ 22 km ದೂರದ ಮಾಕುಟ್ಟ ಗೇಟ್ ತಲುಪಲು ಇದೀಗ ಎರಡು ತಾಸು ಸಮಯ ಬೇಕಾಗಿದೆ. ಒಂದೆಡೆ ಸರ್ಕಾರ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದರು ಕಾಮಗಾರಿ ಮಾತ್ರ ಆರಂಭಗೊಂಡಿಲ್ಲ. ಸದ್ಯಕ್ಕೆ ಗುಳಿ ಮುಚ್ಚುವ ಕಾರ್ಯವಾದರೂ ನಡೆಸಬಹುದಿತ್ತಲ್ಲ ಎಂಬುದು ಇಲ್ಲಿ ಸಂಚರಿಸುವವರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು