12:18 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕರಡಿ ಜತೆ ಮಣ್ಣಿನ ಮಗನ ವೀರೋಚಿತ ಹೋರಾಟ: ರಕ್ತ ಸುರಿಯುತ್ತಿದ್ದಂತೆ ಗ್ರಾಮಕ್ಕೆ ಓಡಿ ಬಂದ ರೈತ

30/01/2026, 17:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ತೋಟದ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಾಯಗೊಂಡ ರೈತನನ್ನು ತರೀಕೆರೆ ತಾಲೂಕಿನ ಎ.ರಾಮನಹಳ್ಳಿ ಗ್ರಾಮದ ರಾಮಕೃಷ್ಣ ಎಂದು ಗುರುತಿಸಲಾಗಿದೆ.
ರಾಮಕೃಷ್ಣ ಅವರ ಕೈ ಹಾಗೂ ಕಾಲಿಗೆ ಕರಡಿ ದಾಳಿಯಿಂದ ತೀವ್ರವಾದ ಗಾಯಗಳಾಗಿವೆ.


ಬೆಳಗ್ಗೆಯೇ ತೋಟಕ್ಕೆ ಟ್ರಿಪ್ ಬಳ್ಳಿ ಬಿಡಲು ರಾಮಕೃಷ್ಣ ಹೊರಟಿದ್ದರು. ಕರಡಿ ದಾಳಿ ವೇಳೆ ಕರಡಿ ಜತೆ ಫೈಟ್ ಮಾಡಿ ಕೈ ಕಾಲಿನಲ್ಲಿ ರಕ್ತ ಸುರಿಯುತ್ತಿದ್ದರೂ ಕರಡಿಯಿಂದ ತಪ್ಪಿಸಿಕೊಂಡು ಗ್ರಾಮಕ್ಕೆ ಓಡಿ ಬಂದಿದ್ದರು. ನಂತರ ಗ್ರಾಮಸ್ಥರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರೈತನ ಮಂಡಿ ಹಾಗೂ ಮೊಣಕೈ ಮೇಲೆ ಕರಡಿ ತೀವ್ರ ತರಹದ ದಾಳಿ ಮಾಡಿದೆ.
ತರೀಕೆರೆ ವಲಯ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು