9:12 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ದಿಢೀರ್ ಆಗಿ ಎದುರಾದ ಕಾಡಾನೆ: ಸ್ಕೂಟರ್ ಪಲ್ಟಿ ಸವಾರನಿಗೆ ಗಾಯ

11/04/2026, 21:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಟ್ಟ ಸಮೀಪ ಕಾಯಿಮಾನಿ ಬಳಿ ರಸ್ತೆ ದಾಟುತ್ತಿದ್ದ ಕಾಡಾನೆಯನ್ನು ಕಂಡು ಭಯ ಭೀತಗೊಂಡ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಗಾಯಗೊಂಡಿದ್ದಾರೆ.
ಕಾಯಿಮಾನಿ ಕಾಫಿ ಮಿಲ್ ಸಮೀಪ ಘಟನೆ ನಡೆದಿದೆ.
ಪೂಜೆಕಲ್ಲ್ ನಿವಾಸಿ ಅರ್ಮುಗಮ್(65) ಗಾಯಗೊಂಡ ಸ್ಕೂಟರ್ ಸವಾರ.

ಅಲ್ಲಿಯೇ ಶ್ರೀಮಂಗಲ ಅರಣ್ಯ ಇಲಾಖೆಯ ಸಿಬ್ಬಂದಿ ಬೀಟ್ ‘ನಲ್ಲಿದ್ದವರಿಗೆ ವಿಷಯ ತಿಳಿದು, ಕುಟ್ಟ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.
ಶಾಸಕ ಪೊನ್ನಣ್ಣ ಆದೇಶದಂತೆ ಮುಖ್ಯ ರಸ್ತೆ ಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಬೀಟ್ ನಲ್ಲಿರುವಂತೆ ಸೂಚನೆ. ಸಾರ್ವಜನಿಕರಿಂದ ಕಾಡಾನೆ ಇರುವಿಕೆ ಬಗ್ಗೆ ಮಾಹಿತಿ ಬಂದ ತಕ್ಷಣ ನಿಗಾ ಇಡುವಂತೆ ಸೂಚಿಸಿದ ಹಿನ್ನಲೆ, ಮುಖ್ಯ ರಸ್ತೆ, ಕಾಡಾನೆ ಇರುವಿಕೆಯ ಸುಳಿವು ಇರುವೆಡೆ ಬೀಟ್ ಕೈಗೊಳ್ಳುವಂತೆ ಸೂಚನೆ.
ಈ ಹಿನ್ನಲೆ ಶ್ರೀಮಂಗಲ ವಲಯ ಅರಣ್ಯಧಿಕಾರಿ ಅರವಿಂದ್ ನೇತೃತ್ವದಲ್ಲಿ ಕುಟ್ಟ -ಕಾಯಿಮಾನಿ ಸುತ್ತಮುತ್ತ ಬೆಳ್ಳಿಗ್ಗೆ 6 ರಿಂದ ಸಂಜೆ 8 ರವರೆಗೆ ಅರಣ್ಯ ಸಿಬ್ಬಂದಿ ಬೀಟ್ ನಿಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು