7:24 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ದಿಢೀರ್ ಆಗಿ ಎದುರಾದ ಕಾಡಾನೆ: ಸ್ಕೂಟರ್ ಪಲ್ಟಿ ಸವಾರನಿಗೆ ಗಾಯ

11/04/2026, 21:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಟ್ಟ ಸಮೀಪ ಕಾಯಿಮಾನಿ ಬಳಿ ರಸ್ತೆ ದಾಟುತ್ತಿದ್ದ ಕಾಡಾನೆಯನ್ನು ಕಂಡು ಭಯ ಭೀತಗೊಂಡ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಗಾಯಗೊಂಡಿದ್ದಾರೆ.
ಕಾಯಿಮಾನಿ ಕಾಫಿ ಮಿಲ್ ಸಮೀಪ ಘಟನೆ ನಡೆದಿದೆ.
ಪೂಜೆಕಲ್ಲ್ ನಿವಾಸಿ ಅರ್ಮುಗಮ್(65) ಗಾಯಗೊಂಡ ಸ್ಕೂಟರ್ ಸವಾರ.

ಅಲ್ಲಿಯೇ ಶ್ರೀಮಂಗಲ ಅರಣ್ಯ ಇಲಾಖೆಯ ಸಿಬ್ಬಂದಿ ಬೀಟ್ ‘ನಲ್ಲಿದ್ದವರಿಗೆ ವಿಷಯ ತಿಳಿದು, ಕುಟ್ಟ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.
ಶಾಸಕ ಪೊನ್ನಣ್ಣ ಆದೇಶದಂತೆ ಮುಖ್ಯ ರಸ್ತೆ ಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಬೀಟ್ ನಲ್ಲಿರುವಂತೆ ಸೂಚನೆ. ಸಾರ್ವಜನಿಕರಿಂದ ಕಾಡಾನೆ ಇರುವಿಕೆ ಬಗ್ಗೆ ಮಾಹಿತಿ ಬಂದ ತಕ್ಷಣ ನಿಗಾ ಇಡುವಂತೆ ಸೂಚಿಸಿದ ಹಿನ್ನಲೆ, ಮುಖ್ಯ ರಸ್ತೆ, ಕಾಡಾನೆ ಇರುವಿಕೆಯ ಸುಳಿವು ಇರುವೆಡೆ ಬೀಟ್ ಕೈಗೊಳ್ಳುವಂತೆ ಸೂಚನೆ.
ಈ ಹಿನ್ನಲೆ ಶ್ರೀಮಂಗಲ ವಲಯ ಅರಣ್ಯಧಿಕಾರಿ ಅರವಿಂದ್ ನೇತೃತ್ವದಲ್ಲಿ ಕುಟ್ಟ -ಕಾಯಿಮಾನಿ ಸುತ್ತಮುತ್ತ ಬೆಳ್ಳಿಗ್ಗೆ 6 ರಿಂದ ಸಂಜೆ 8 ರವರೆಗೆ ಅರಣ್ಯ ಸಿಬ್ಬಂದಿ ಬೀಟ್ ನಿಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು