1:26 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ ತೀವ್ರ ಗಾಯ

05/12/2025, 20:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರದ ಕಣಿವೆ ಗ್ರಾಮದಲ್ಲಿ ಹೆಜ್ಜೇನು ದಾಳಿ ನಡೆಸಿ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಸೋಮವಾರಪೇಟೆ ತಹಸೀಲ್ದಾರ್ ಕಚೇರಿ ಸಿಬ್ಬಂದಿ ಕಾರ್ತಿಕ್ ಕುಮಾರ್, ಅವರ ತಾಯಿ ಉಷಾ ಮತ್ತು ಚಿಕ್ಕಪ್ಪ ಪ್ರಕಾಶ್ ಗಾಯಗೊಂಡವರು. ಹುತ್ತರಿ ಅಂಗವಾಗಿ ಕಚೇರಿಗೆ ರಜೆ ಇದ್ದುದರಿಂದ ಕಾರ್ತಿಕ್ ತಾಯಿಯೊಂದಿಗೆ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ದಾಳಿ ನಡೆಸಿದೆ.
ತಕ್ಷಣವೇ ಕಿರುಚಿಕೊಂಡು ಕಾರಿನತ್ತ ಓಡಿ ಬಂದು ರಕ್ಷಿಸಿಕೊಂಡಿದ್ದಾರೆ, ಬಳಿಕ ತಾವೇ ಕಾರಿನಲ್ಲಿ ಕುಶಾಲನಗರ ಆಸ್ಪತ್ರೆಗೆ ಆಗಮಿಸಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಪ್ಪ ಪ್ರಕಾಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು