6:11 AM Thursday9 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಮೈದಳೆದ ಶ್ವೇತ ಸುಂದರಿ: ಹೆದ್ದಾರಿ ಇಕ್ಕೆಲಗಳಲ್ಲಿ ಅರಳಿ ನಿಂತ ಕ್ರಿಸ್ಮಸ್ ಹೂ

23/12/2025, 21:47

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನಲ್ಲಿ ಚಳಿ ತೀವ್ರತೆ ಪಡೆಯುತ್ತಿದೆ, ಮೈ ಕೊರೆಯುವ ಚಳಿಯ ನಡುವೆಯೂ ಚಳಿಗಾಲದ ಸುಂದರಿ ಜಿಲ್ಲಾ ಕೇಂದ್ರ ಮಡಿಕೇರಿಗೆ ಆಗಮಿಸುವ ಪ್ರವಾಸಿಗರಿಗೆ ಸ್ವಾಗತ ಕೋರುತ್ತಿವೆ.
ಹೌದು, ಡಿಸೆಂಬರ್ ತಿಂಗಳಿನಲ್ಲಿ ಮಾತ್ರ ಕಾರಣ ಸಿಗುವ ಶ್ವೇತ ವರ್ಣದ ಈ ಸುಂದರಿ ರಸ್ತೆಯ ಇಕ್ಕೆಲಗಳಲ್ಲಿ ಕಂಗೊಳಿಸುತ್ತಿವೆ.


ಮಡಿಕೇರಿ ಮಂಗಳೂರು ಹಾಗೂ ಮಡಿಕೇರಿ ಸುಂಟಿಕೊಪ್ಪ ನಡುವಿನ ರಾಷ್ಟ್ರೀಯ ಹೆದ್ದಾರಿ ಮತ್ತು ಚೆಟ್ಟಳ್ಳಿ ಭಾಗದಲ್ಲಿ ಈ ಹೂವುಗಳು ಅರಳಿ ನಿಂತಿದೆ. ಈ ಹೂವುಗಳಿಗೆ ನಿರ್ದಿಷ್ಟ ಹೆಸರು ಇಲ್ಲದಿದ್ದರೂ ಡಿಸೆಂಬರ್ ಆದ ಕಾರಣ ಕ್ರಿಸ್ಮಸ್ ಹೂ ಎಂದು ಸ್ಥಳೀಯವಾಗಿ ಕರೆಯಲಾಗುತ್ತದೆ. ದಕ್ಷಿಣ ಭಾರತದಲ್ಲಿ ಅದ್ರಲ್ಲೂ ಕೊಡಗಿನಲ್ಲಿ ಹೆಚ್ಚಾಗಿ ಕಾಣ ಸಿಗುವ ಈ ಹೂವುಗಳಿಗೆ ಆಂಗ್ಲ ಭಾಷೆಯಲ್ಲಿ ಕೋಟ್ ಬಟನ್ಸ್ ಎಂದು ಕರೆಯುವುದು ಇದೆ. ಸಾಮಾನ್ಯವಾಗಿ ಇವು ಅರಣ್ಯದ ಕಳೆ ಗಿಡಗಳ ಪೈಕಿ ಒಂದಾಗಿದ್ದು, ಇದರ ಎಲೆಗಳು ಗಾಯಗಳ ಉಪಶಮನಕ್ಕೆ ಔಷದಿಯಾಗಿಯೂ ಬಳಸಲಾಗುತ್ತದೆ. ಒಟ್ಟಿನಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷಚರಣೆಗೆ ಆಗಮಿಸುತ್ತಿರುವ ಪ್ರವಾಸಿಗರಿಗೆ, ಸೆಲ್ಫಿ ಕ್ಲಿಕ್ಕಿಸಿಕೊಳ್ಳುವವರಿಗೆ ರಸ್ತೆ ಬದಿಯಲ್ಲಿ ಆಹ್ವಾನ ನೀಡುತ್ತಿರುವುದoತು ಸತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು