4:49 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಕೊಡಗಿನ ಕುಗ್ರಾಮ ಬೆಟ್ಟತೂರುನಲ್ಲಿ ಕಾಡಾನೆ ದಾಳಿಗೆ ಯುವತಿ ಬಲಿ: ತಾಯಿಯ ಕಣ್ಣೆದುರೇ ನಡೆದ ದುರ್ಘಟನೆ

01/03/2026, 11:07

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕು ಮದೆನಾಡು ಗ್ರಾಮ ಪಂಚಾಯಿತಿ ತಾಲ್ಲೂಕಿನ ಬೆಟ್ಟತೂರು ಗ್ರಾಮದಲ್ಲಿ ಕಾಡಾನೆಯೊಂದು ದಾಳಿ ನಡೆಸಿದ್ದು ಯುವತಿಯೊಬ್ಬಳು ಬಲಿಯಾದ ಘಟನೆ ನಡೆದಿದೆ.


ಮಡಿಕೇರಿಯ ಸಂತ ಮೈಕಲ್ ಕಾಲೇಜು ನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪೂಜ್ಯ (19) ಮೃತ ದುರ್ದೈವಿ. ಸದಾ ಕಾಡಾನೆ ಓಡಾಟದ ಭೀತಿ ಇರುವ ಬೆಟ್ಟತೂರು ಗ್ರಾಮದಲ್ಲಿ ತನ್ನ ಚೆರಂಬಾಣೆಯಿಂದ ತಂದೆ ತಾಯಿಯೊಂದಿಗೆ ಬೈಕ್ ನಲ್ಲಿ ಗ್ರಾಮಕ್ಕೆ ಬಂದಿದ್ದು, ಕಡಿದಾದ ರಸ್ತೆಯ ಕಾರಣ ಮೂವರು ಬೈಕ್ ನಲ್ಲಿ ತೆರಳಲು ಸಾಧ್ಯವಾಗದ ಕಾರಣ ತಾಯಿ ದೇವಕ್ಕಿಯೊಂದಿಗೆ ಮನೆಯತ್ತ ಹೆಜ್ಜೆ ಹಾಕುತ್ತಿದ್ದoತೆ ಕಾಡಾನೆ ಪೂಜ್ಯ ಮೇಲೆ ಏಕಾಏಕಿ ದಾಳಿ ನಡೆಸಿ ತುಳಿದು ಹಾಕಿದೆ,ಆನೆ ದಾಳಿ ಮಾಡುತ್ತಿದ್ದoತೆ ತಾಯಿ ದೇವಕ್ಕಿ ಜೋರಾಗಿ ಬಾಯಿ ಬಡಿದುಕೊಂಡಿದ್ದು, ಇದನ್ನು ಕೇಳಿ ಚಂಗಪ್ಪ ಸ್ಥಳಕ್ಕೆ ಓಡಿ ಬಂದಿದ್ದಾರೆ. ತಕ್ಷಣವೇ ಕಡಿದಾದ ರಸ್ತೆಯಲ್ಲಿ ಆಸ್ಪತ್ರೆಗೆ ತರುವ ಪ್ರಯತ್ನ ನಡೆಸಲಾಯಿತಾದರೂ, ಅಷ್ಟರಲ್ಲೇ ಪೂಜ್ಯ ಪ್ರಾಣ ಪಕ್ಷಿ ಹಾರಿ ಹೋಗಿದೆ. ಕಾಡಾನೆಗಳ ಹಾವಳಿ, ಅಸಮಾರ್ಪಕ ರಸ್ತೆ ಸಂಪರ್ಕ, ದಿನಕ್ಕೆ ಬೆಳಗ್ಗೆ ಸಂಜೆ ಬಂದು ಹೋಗುವ ಬಸ್ಸು.ಇಂತಹ ಕುಗ್ರಾಮವಾಗಿರುವ ಬೆಟ್ಟತೂರು ಗ್ರಾಮದ ಸಮಸ್ಯೆಗೆ ಪರಿಹಾರ ಎನ್ನುವುದೇ ಎದ್ದಿರುವ ಪ್ರಶ್ನೆ.

ಇತ್ತೀಚಿನ ಸುದ್ದಿ

ಜಾಹೀರಾತು