4:52 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಆಡಳಿತವನ್ನು ಜನರ ಬಳಿ ಒಯ್ಯಲು ಅಥಣಿ ಜಿಲ್ಲೆ ರಚನೆಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಗ್ರಹ: ಸಿಎಂಗೆ ಮನವಿ ಸಲ್ಲಿಸಲು ನಿರ್ಧಾರ

11/12/2023, 18:54

ಶಿವರಾಯ ಲಕ್ಷ್ಮಣ ಕರ್ಕರಮುಂಡಿ

info.reporterkarnataka@gmail.com

ಬೆಳಗಾವಿ ದೊಡ್ಡ ಜಿಲ್ಲೆ. ಇಲ್ಲಿ 18 ವಿಧಾನಸಭೆ ಕ್ಷೇತ್ರಗಳಿವೆ.
ಅಥಣಿ ಇಲ್ಲಿನ ಕೊನೆಯ ತಾಲೂಕು. ಬೆಳಗಾವಿ ಜಿಲ್ಲಾ ಕೇಂದ್ರದಿಂದ ತುಂಬಾ ದೂರದಲ್ಲಿದ್ದು, ಆಡಳಿತವನ್ನು ಇನ್ನಷ್ಟು ಸಮೀಪಕ್ಕೆ ತರುವ ದೃಷ್ಟಿಯಿಂದ ಅಥಣಿ ಜಿಲ್ಲಾ ಕೇಂದ್ರ ಆಗಬೇಕಿದೆ ಎಂದು ಮಾಜಿ ಡಿಸಿಎಂ, ಹಾಲಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅಥಣಿ ಜಿಲ್ಲಾ ಹೋರಾಟ ಸಮಿತಿಯಿಂದ ಸೋಮವಾರ ನಡೆದ ಪ್ರತಿಭಟನೆ ಹಾಗೂ ಮನವಿ ಸಲ್ಲಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಸದನದಲ್ಲಿ ಈ ಕುರಿತು ಸರ್ಕಾರ ಗಮನವನ್ನು ಸೆಳೆಯುತ್ತೇನೆ. ಅಥಣಿ ಸುತ್ತಮುತ್ತ ಶಾಸಕರು ಕೂಡ ಬೆಂಬಲ ಸೂಚಿಸಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಸುಮಾರು 35- 40 ಕಿ‌ಮೀ. ವಿಸ್ತೀರ್ಣದ ಜಿಲ್ಲೆ ರಚಿಸಲು ಆಹ್ರಹಿಸಲಾಗುತ್ತದೆ. ಬಾಗಲಕೋಟೆ ಜಿಲ್ಲೆಗೆ ಸೇರಿದ ವಿಧಾನಸಭೆ ಕ್ಷೇತ್ರವನ್ನೂ ಅಥಣಿ ಜಿಲ್ಲೆಗೆ ಸೇರಿಸಬೇಕು. ಅಲ್ಲಿನ ಜನರಿಗೆ ಬಾಗಲಕೋಟೆಗೆ ತೆರಳುವುದಕ್ಕಿಂತ ಅಥಣಿ ಸಮೀಪವಾಗುತ್ತದೆ ಎಂದು ಸವದಿ ನುಡಿದರು.
ಅಥಣಿ ಜಿಲ್ಲಾ ಕೇಂದ್ರಕ್ಕೆ ನೆರೆಯು ಶಾಸಕರು ಕೂಡಾ ಸದನದಲ್ಲಿ ಧ್ವನಿ ಎತ್ತುತಾರೆ. ಈ ಭಾಗದ ಜನರ ಭಾವನೆಯನ್ನು ಮುಖ್ಯಮಂತ್ರಿ ಅವರನ್ನು ಖುದ್ದಾಗಿ ಭೇಟಿಯಾಗಿ ಪ್ರಸ್ತಾಪ ಸಲ್ಲಿಸುತ್ತೇನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು