4:12 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಆಡಳಿತವನ್ನು ಜನರ ಬಳಿ ಒಯ್ಯಲು ಅಥಣಿ ಜಿಲ್ಲೆ ರಚನೆಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಗ್ರಹ: ಸಿಎಂಗೆ ಮನವಿ ಸಲ್ಲಿಸಲು ನಿರ್ಧಾರ

11/12/2023, 18:54

ಶಿವರಾಯ ಲಕ್ಷ್ಮಣ ಕರ್ಕರಮುಂಡಿ

info.reporterkarnataka@gmail.com

ಬೆಳಗಾವಿ ದೊಡ್ಡ ಜಿಲ್ಲೆ. ಇಲ್ಲಿ 18 ವಿಧಾನಸಭೆ ಕ್ಷೇತ್ರಗಳಿವೆ.
ಅಥಣಿ ಇಲ್ಲಿನ ಕೊನೆಯ ತಾಲೂಕು. ಬೆಳಗಾವಿ ಜಿಲ್ಲಾ ಕೇಂದ್ರದಿಂದ ತುಂಬಾ ದೂರದಲ್ಲಿದ್ದು, ಆಡಳಿತವನ್ನು ಇನ್ನಷ್ಟು ಸಮೀಪಕ್ಕೆ ತರುವ ದೃಷ್ಟಿಯಿಂದ ಅಥಣಿ ಜಿಲ್ಲಾ ಕೇಂದ್ರ ಆಗಬೇಕಿದೆ ಎಂದು ಮಾಜಿ ಡಿಸಿಎಂ, ಹಾಲಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅಥಣಿ ಜಿಲ್ಲಾ ಹೋರಾಟ ಸಮಿತಿಯಿಂದ ಸೋಮವಾರ ನಡೆದ ಪ್ರತಿಭಟನೆ ಹಾಗೂ ಮನವಿ ಸಲ್ಲಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಸದನದಲ್ಲಿ ಈ ಕುರಿತು ಸರ್ಕಾರ ಗಮನವನ್ನು ಸೆಳೆಯುತ್ತೇನೆ. ಅಥಣಿ ಸುತ್ತಮುತ್ತ ಶಾಸಕರು ಕೂಡ ಬೆಂಬಲ ಸೂಚಿಸಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಸುಮಾರು 35- 40 ಕಿ‌ಮೀ. ವಿಸ್ತೀರ್ಣದ ಜಿಲ್ಲೆ ರಚಿಸಲು ಆಹ್ರಹಿಸಲಾಗುತ್ತದೆ. ಬಾಗಲಕೋಟೆ ಜಿಲ್ಲೆಗೆ ಸೇರಿದ ವಿಧಾನಸಭೆ ಕ್ಷೇತ್ರವನ್ನೂ ಅಥಣಿ ಜಿಲ್ಲೆಗೆ ಸೇರಿಸಬೇಕು. ಅಲ್ಲಿನ ಜನರಿಗೆ ಬಾಗಲಕೋಟೆಗೆ ತೆರಳುವುದಕ್ಕಿಂತ ಅಥಣಿ ಸಮೀಪವಾಗುತ್ತದೆ ಎಂದು ಸವದಿ ನುಡಿದರು.
ಅಥಣಿ ಜಿಲ್ಲಾ ಕೇಂದ್ರಕ್ಕೆ ನೆರೆಯು ಶಾಸಕರು ಕೂಡಾ ಸದನದಲ್ಲಿ ಧ್ವನಿ ಎತ್ತುತಾರೆ. ಈ ಭಾಗದ ಜನರ ಭಾವನೆಯನ್ನು ಮುಖ್ಯಮಂತ್ರಿ ಅವರನ್ನು ಖುದ್ದಾಗಿ ಭೇಟಿಯಾಗಿ ಪ್ರಸ್ತಾಪ ಸಲ್ಲಿಸುತ್ತೇನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು