8:19 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಆಡಳಿತವನ್ನು ಜನರ ಬಳಿ ಒಯ್ಯಲು ಅಥಣಿ ಜಿಲ್ಲೆ ರಚನೆಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಗ್ರಹ: ಸಿಎಂಗೆ ಮನವಿ ಸಲ್ಲಿಸಲು ನಿರ್ಧಾರ

11/12/2023, 18:54

ಶಿವರಾಯ ಲಕ್ಷ್ಮಣ ಕರ್ಕರಮುಂಡಿ

info.reporterkarnataka@gmail.com

ಬೆಳಗಾವಿ ದೊಡ್ಡ ಜಿಲ್ಲೆ. ಇಲ್ಲಿ 18 ವಿಧಾನಸಭೆ ಕ್ಷೇತ್ರಗಳಿವೆ.
ಅಥಣಿ ಇಲ್ಲಿನ ಕೊನೆಯ ತಾಲೂಕು. ಬೆಳಗಾವಿ ಜಿಲ್ಲಾ ಕೇಂದ್ರದಿಂದ ತುಂಬಾ ದೂರದಲ್ಲಿದ್ದು, ಆಡಳಿತವನ್ನು ಇನ್ನಷ್ಟು ಸಮೀಪಕ್ಕೆ ತರುವ ದೃಷ್ಟಿಯಿಂದ ಅಥಣಿ ಜಿಲ್ಲಾ ಕೇಂದ್ರ ಆಗಬೇಕಿದೆ ಎಂದು ಮಾಜಿ ಡಿಸಿಎಂ, ಹಾಲಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅಥಣಿ ಜಿಲ್ಲಾ ಹೋರಾಟ ಸಮಿತಿಯಿಂದ ಸೋಮವಾರ ನಡೆದ ಪ್ರತಿಭಟನೆ ಹಾಗೂ ಮನವಿ ಸಲ್ಲಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಸದನದಲ್ಲಿ ಈ ಕುರಿತು ಸರ್ಕಾರ ಗಮನವನ್ನು ಸೆಳೆಯುತ್ತೇನೆ. ಅಥಣಿ ಸುತ್ತಮುತ್ತ ಶಾಸಕರು ಕೂಡ ಬೆಂಬಲ ಸೂಚಿಸಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಸುಮಾರು 35- 40 ಕಿ‌ಮೀ. ವಿಸ್ತೀರ್ಣದ ಜಿಲ್ಲೆ ರಚಿಸಲು ಆಹ್ರಹಿಸಲಾಗುತ್ತದೆ. ಬಾಗಲಕೋಟೆ ಜಿಲ್ಲೆಗೆ ಸೇರಿದ ವಿಧಾನಸಭೆ ಕ್ಷೇತ್ರವನ್ನೂ ಅಥಣಿ ಜಿಲ್ಲೆಗೆ ಸೇರಿಸಬೇಕು. ಅಲ್ಲಿನ ಜನರಿಗೆ ಬಾಗಲಕೋಟೆಗೆ ತೆರಳುವುದಕ್ಕಿಂತ ಅಥಣಿ ಸಮೀಪವಾಗುತ್ತದೆ ಎಂದು ಸವದಿ ನುಡಿದರು.
ಅಥಣಿ ಜಿಲ್ಲಾ ಕೇಂದ್ರಕ್ಕೆ ನೆರೆಯು ಶಾಸಕರು ಕೂಡಾ ಸದನದಲ್ಲಿ ಧ್ವನಿ ಎತ್ತುತಾರೆ. ಈ ಭಾಗದ ಜನರ ಭಾವನೆಯನ್ನು ಮುಖ್ಯಮಂತ್ರಿ ಅವರನ್ನು ಖುದ್ದಾಗಿ ಭೇಟಿಯಾಗಿ ಪ್ರಸ್ತಾಪ ಸಲ್ಲಿಸುತ್ತೇನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು