12:41 PM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಪಟ್ಟಾಭಿಷೇಕ ದಶಮಾನೋತ್ಸವ

21/02/2023, 20:24

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ನಾಥ ಸ್ವಾಮೀಜಿಯವರ ಹತ್ತನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀಗಳಿಗೆ ಕಿರೀಟ, ಕಂಠಿಹಾರ ಹಾಗೂ ಶಾಲು ಹೊದಿಸುವ ಮೂಲಕ ಪುಷ್ಪಾರ್ಚನೆ ಮಾಡಿ ದಶಮಾನೋತ್ಸವದ ಪಟ್ಟಾಭಿಷೇಕ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಸಾಧು ಸಂತರು ಗಣ್ಯರು ಹಾಜರಿದ್ದರು. ಆದಿಚುಂಚನಗಿರಿ ಕ್ಷೇತ್ರದ ಎರಡು ದಿನಗಳ ಕಾಲ ನಡೆದ ಜ್ಞಾನವಿಜ್ಞಾನ ಮತ್ತು ತಂತ್ರಜ್ಞಾನ ಮೇಳ ಹಾಗೂ ಶೀಗಳ 10ನೇ ವರ್ಷದ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವಕ್ಕೆ ಸೋಮವಾರ ಸಂಜೆ ಕಾರ್ಯಕ್ರಮ ಮುಕ್ತಾಯವಾಯಿತು.

ಕ್ಷೇತ್ರದ ಆದಿಶಕ್ತಿ ಮತ್ತು ಶಿವಶಕ್ತಿ ಸಮುದಾಯ ಭವನಗಳಲ್ಲಿ ಆಯೋಜನೆ ಮಾಡಿದ ಮೇಳವನ್ನು ಸಾವಿರಾರು ವಿದ್ಯಾರ್ಥಿಗಳು ವೀಕ್ಷಿಸಿದರು. ಮೇಳದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಹೊಸ ಹೊಸ ಆವಿಷ್ಕಾರಗಳು ಹಾಗೂ ಸಾರ್ವಜನಿಕರು ಜನಮನಗೊಂಡವು.

ಇದೇ ಸಂದರ್ಭದಲ್ಲಿ ಹಲವು ವಿಜ್ಞಾನಿಗಳು ಪಾಲ್ಗೊಂಡು ಪ್ರಸ್ತುತ ಮತ್ತು ಮುಂದಿನ ವಿಜ್ಞಾನದ ಆವಿಷ್ಕಾರಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.
ವಿಜ್ಞಾನಕ್ಕೆ ಸಂಬಂಧಿಸಿದಂತ ಯುವ ವಿಜ್ಞಾನಿಗಳಿಗೆ ಹಲವು ವಿಚಾರ ಸಂಕೀರ್ಣಗಳು ನಡೆದು ನಡೆದವು ಅನೇಕ ಮಂದಿ ವಿಜ್ಞಾನ ವಿದ್ಯಾರ್ಥಿಗಳು ಮೇಳದ ಉಪಯೋಗ ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು