12:00 PM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಆದಿ ಚುಂಚನಗಿರಿ ವೈದ್ಯಕೀಯ ವಿದ್ಯಾಲಯದಲ್ಲಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ 

14/08/2021, 10:12

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ನ್ಯಾಯ ವೈದ್ಯಶಾಸ್ತ್ರ ವಿಭಾಗದಿಂದ ಒಂದು ದಿನದ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ ನಡೆಯಿತು.

ಪ್ರಾಂಶುಪಾಲ ಡಾ. ಎಂ.ಜಿ.ಶಿವರಾಮು ಅವರು ಪ್ರಾಸ್ತವಿಕ ಮಾತನಾಡಿ, ನಾವು ನ್ಯಾಯ, ವೈದ್ಯಶಾಸ್ತ್ರ ವಿಭಾಗದಲ್ಲಿ ವಿಷ ಮಾಹಿತಿ ಕೇಂದ್ರ ಹಾಗೂ ವಿಷ ವಿಶ್ಲೇಷಣಾ ಪ್ರಯೋಗಾಲಯ ಪ್ರಾರಂಭಿಸಿದ್ದೇವೆ. ಇದಕ್ಕೆ ಕೆಲವು ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳೇ ನಮಗೆ ಸ್ಪೂರ್ತಿದಾಯಕ ಎಂದು ಹೇಳಿದರು.

ಈ ಕೇಂದ್ರ ಯಶಸ್ವಿಯಾಗಿ ಕಾಯನಿರ್ವಹಿಸಲು ಪ್ರೇರಕವಾಗಿ, ಪೂರಕವಾಗಿ ಹಾಗೂ ಪ್ರೋತ್ಸಾಹಕವಾಗಿ ಸುಸಜ್ಜಿತ ಪ್ರಯೋಗಾಲಯವಿದೆ. ಈ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮವು ಯಶಸ್ವಿಯಾಗಿ ಇದರ ಪ್ರಯೋಜನ ಎಲ್ಲರಿಗೂ ಲಭಿಸಲಿ ಎಂದು ನುಡಿದರು. 

ನ್ಯಾಯ ವೈದ್ಯಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಸೋಮಶೇಖರ್ ಸಿ., ಅತಿಥಿ ಉಪನ್ಯಾಸಕರಾದ ಡಾ. ಶಂಕರ್ ಎಂ. ಬಕಣ್ಣನವರ್ ಅವರನ್ನು ಪರಿಚಯಿಸಿದರು. 

ಮಣಿಪಾಲ್ ಉನ್ನತ ಶಿಕ್ಷಣ ಸಂಸ್ಥೆಯ ನ್ಯಾಯ ವೈದ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಂಕರ್ ಎಂ. ಬಕಣ್ಣನವರ್ ತಮ್ಮ ಅತಿಥಿ ಉಪನ್ಯಾಸದಲ್ಲಿ ಚಿಕಿತ್ಸಾ ವಿಷ ಶಾಸ್ತ್ರದಲ್ಲಿ ವಿಷ ಮಾಹಿತಿ ಕೇಂದ್ರ ಹಾಗೂ ವಿಷ ವಿಶ್ಲೇಷಣಾ ಪ್ರಯೋಗಾಲಯ ಜವಾಬ್ದಾರಿ ಹಾಗೂ ಕರ್ತವ್ಯಗಳ ಬಗ್ಗೆ ವಿಶೇಷವಾಗಿ ಉಪನ್ಯಾಸ ನೀಡಿದರು.

ದೇಶದಲ್ಲಿ ವರ್ಷಕ್ಕೆ 50 ಸಾವಿರಕ್ಕೂ ಹೆಚ್ಚು ಜನರು ವಿಷ ಸೇವನೆಯಿಂದ ಸಾವಿಗೀಡಾಗುತ್ತಿದ್ದಾರೆ ಎಂದು ಹೇಳಿದ ಅವರು, ಈ ಕೆಂದ್ರದಿಂದ ವಿಷಸೇವನೆ ಆಗುವುದನ್ನು ತಡೆಗಟ್ಟುವುದು ಹಾಗೂ ವಿಷಸೇವನೆ ಆದವರಿಗೆ ಸರಿಯಾದ ಚಿಕಿತ್ಸೆ ಸಿಗುವಂತಾಗಿ ಗುಣಮುಖರಾಗಬೇಕೆಂದು ತಾರ್ಕಿಕವಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಆದಿ ಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಬೋಧಕ ವರ್ಗದವರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಗಣ್ಯರನ್ನು ನ್ಯಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ್ ಸ್ವಾಗತಿಸಿದರು. ನ್ಯಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಚಿನ್ಮಯಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು