5:06 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಆದಿ ಚುಂಚನಗಿರಿ ವೈದ್ಯಕೀಯ ವಿದ್ಯಾಲಯದಲ್ಲಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ 

14/08/2021, 10:12

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ನ್ಯಾಯ ವೈದ್ಯಶಾಸ್ತ್ರ ವಿಭಾಗದಿಂದ ಒಂದು ದಿನದ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ ನಡೆಯಿತು.

ಪ್ರಾಂಶುಪಾಲ ಡಾ. ಎಂ.ಜಿ.ಶಿವರಾಮು ಅವರು ಪ್ರಾಸ್ತವಿಕ ಮಾತನಾಡಿ, ನಾವು ನ್ಯಾಯ, ವೈದ್ಯಶಾಸ್ತ್ರ ವಿಭಾಗದಲ್ಲಿ ವಿಷ ಮಾಹಿತಿ ಕೇಂದ್ರ ಹಾಗೂ ವಿಷ ವಿಶ್ಲೇಷಣಾ ಪ್ರಯೋಗಾಲಯ ಪ್ರಾರಂಭಿಸಿದ್ದೇವೆ. ಇದಕ್ಕೆ ಕೆಲವು ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳೇ ನಮಗೆ ಸ್ಪೂರ್ತಿದಾಯಕ ಎಂದು ಹೇಳಿದರು.

ಈ ಕೇಂದ್ರ ಯಶಸ್ವಿಯಾಗಿ ಕಾಯನಿರ್ವಹಿಸಲು ಪ್ರೇರಕವಾಗಿ, ಪೂರಕವಾಗಿ ಹಾಗೂ ಪ್ರೋತ್ಸಾಹಕವಾಗಿ ಸುಸಜ್ಜಿತ ಪ್ರಯೋಗಾಲಯವಿದೆ. ಈ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮವು ಯಶಸ್ವಿಯಾಗಿ ಇದರ ಪ್ರಯೋಜನ ಎಲ್ಲರಿಗೂ ಲಭಿಸಲಿ ಎಂದು ನುಡಿದರು. 

ನ್ಯಾಯ ವೈದ್ಯಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಸೋಮಶೇಖರ್ ಸಿ., ಅತಿಥಿ ಉಪನ್ಯಾಸಕರಾದ ಡಾ. ಶಂಕರ್ ಎಂ. ಬಕಣ್ಣನವರ್ ಅವರನ್ನು ಪರಿಚಯಿಸಿದರು. 

ಮಣಿಪಾಲ್ ಉನ್ನತ ಶಿಕ್ಷಣ ಸಂಸ್ಥೆಯ ನ್ಯಾಯ ವೈದ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಂಕರ್ ಎಂ. ಬಕಣ್ಣನವರ್ ತಮ್ಮ ಅತಿಥಿ ಉಪನ್ಯಾಸದಲ್ಲಿ ಚಿಕಿತ್ಸಾ ವಿಷ ಶಾಸ್ತ್ರದಲ್ಲಿ ವಿಷ ಮಾಹಿತಿ ಕೇಂದ್ರ ಹಾಗೂ ವಿಷ ವಿಶ್ಲೇಷಣಾ ಪ್ರಯೋಗಾಲಯ ಜವಾಬ್ದಾರಿ ಹಾಗೂ ಕರ್ತವ್ಯಗಳ ಬಗ್ಗೆ ವಿಶೇಷವಾಗಿ ಉಪನ್ಯಾಸ ನೀಡಿದರು.

ದೇಶದಲ್ಲಿ ವರ್ಷಕ್ಕೆ 50 ಸಾವಿರಕ್ಕೂ ಹೆಚ್ಚು ಜನರು ವಿಷ ಸೇವನೆಯಿಂದ ಸಾವಿಗೀಡಾಗುತ್ತಿದ್ದಾರೆ ಎಂದು ಹೇಳಿದ ಅವರು, ಈ ಕೆಂದ್ರದಿಂದ ವಿಷಸೇವನೆ ಆಗುವುದನ್ನು ತಡೆಗಟ್ಟುವುದು ಹಾಗೂ ವಿಷಸೇವನೆ ಆದವರಿಗೆ ಸರಿಯಾದ ಚಿಕಿತ್ಸೆ ಸಿಗುವಂತಾಗಿ ಗುಣಮುಖರಾಗಬೇಕೆಂದು ತಾರ್ಕಿಕವಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಆದಿ ಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಬೋಧಕ ವರ್ಗದವರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಗಣ್ಯರನ್ನು ನ್ಯಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ್ ಸ್ವಾಗತಿಸಿದರು. ನ್ಯಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಚಿನ್ಮಯಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು