7:23 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಆದಿ ಚುಂಚನಗಿರಿ ವೈದ್ಯಕೀಯ ವಿದ್ಯಾಲಯದಲ್ಲಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ 

14/08/2021, 10:12

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ನ್ಯಾಯ ವೈದ್ಯಶಾಸ್ತ್ರ ವಿಭಾಗದಿಂದ ಒಂದು ದಿನದ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ ನಡೆಯಿತು.

ಪ್ರಾಂಶುಪಾಲ ಡಾ. ಎಂ.ಜಿ.ಶಿವರಾಮು ಅವರು ಪ್ರಾಸ್ತವಿಕ ಮಾತನಾಡಿ, ನಾವು ನ್ಯಾಯ, ವೈದ್ಯಶಾಸ್ತ್ರ ವಿಭಾಗದಲ್ಲಿ ವಿಷ ಮಾಹಿತಿ ಕೇಂದ್ರ ಹಾಗೂ ವಿಷ ವಿಶ್ಲೇಷಣಾ ಪ್ರಯೋಗಾಲಯ ಪ್ರಾರಂಭಿಸಿದ್ದೇವೆ. ಇದಕ್ಕೆ ಕೆಲವು ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳೇ ನಮಗೆ ಸ್ಪೂರ್ತಿದಾಯಕ ಎಂದು ಹೇಳಿದರು.

ಈ ಕೇಂದ್ರ ಯಶಸ್ವಿಯಾಗಿ ಕಾಯನಿರ್ವಹಿಸಲು ಪ್ರೇರಕವಾಗಿ, ಪೂರಕವಾಗಿ ಹಾಗೂ ಪ್ರೋತ್ಸಾಹಕವಾಗಿ ಸುಸಜ್ಜಿತ ಪ್ರಯೋಗಾಲಯವಿದೆ. ಈ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮವು ಯಶಸ್ವಿಯಾಗಿ ಇದರ ಪ್ರಯೋಜನ ಎಲ್ಲರಿಗೂ ಲಭಿಸಲಿ ಎಂದು ನುಡಿದರು. 

ನ್ಯಾಯ ವೈದ್ಯಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಸೋಮಶೇಖರ್ ಸಿ., ಅತಿಥಿ ಉಪನ್ಯಾಸಕರಾದ ಡಾ. ಶಂಕರ್ ಎಂ. ಬಕಣ್ಣನವರ್ ಅವರನ್ನು ಪರಿಚಯಿಸಿದರು. 

ಮಣಿಪಾಲ್ ಉನ್ನತ ಶಿಕ್ಷಣ ಸಂಸ್ಥೆಯ ನ್ಯಾಯ ವೈದ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಂಕರ್ ಎಂ. ಬಕಣ್ಣನವರ್ ತಮ್ಮ ಅತಿಥಿ ಉಪನ್ಯಾಸದಲ್ಲಿ ಚಿಕಿತ್ಸಾ ವಿಷ ಶಾಸ್ತ್ರದಲ್ಲಿ ವಿಷ ಮಾಹಿತಿ ಕೇಂದ್ರ ಹಾಗೂ ವಿಷ ವಿಶ್ಲೇಷಣಾ ಪ್ರಯೋಗಾಲಯ ಜವಾಬ್ದಾರಿ ಹಾಗೂ ಕರ್ತವ್ಯಗಳ ಬಗ್ಗೆ ವಿಶೇಷವಾಗಿ ಉಪನ್ಯಾಸ ನೀಡಿದರು.

ದೇಶದಲ್ಲಿ ವರ್ಷಕ್ಕೆ 50 ಸಾವಿರಕ್ಕೂ ಹೆಚ್ಚು ಜನರು ವಿಷ ಸೇವನೆಯಿಂದ ಸಾವಿಗೀಡಾಗುತ್ತಿದ್ದಾರೆ ಎಂದು ಹೇಳಿದ ಅವರು, ಈ ಕೆಂದ್ರದಿಂದ ವಿಷಸೇವನೆ ಆಗುವುದನ್ನು ತಡೆಗಟ್ಟುವುದು ಹಾಗೂ ವಿಷಸೇವನೆ ಆದವರಿಗೆ ಸರಿಯಾದ ಚಿಕಿತ್ಸೆ ಸಿಗುವಂತಾಗಿ ಗುಣಮುಖರಾಗಬೇಕೆಂದು ತಾರ್ಕಿಕವಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಆದಿ ಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಬೋಧಕ ವರ್ಗದವರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಗಣ್ಯರನ್ನು ನ್ಯಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ್ ಸ್ವಾಗತಿಸಿದರು. ನ್ಯಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಚಿನ್ಮಯಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು