11:17 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಆದಿ ಚುಂಚನಗಿರಿ ವೈದ್ಯಕೀಯ ವಿದ್ಯಾಲಯದಲ್ಲಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ 

14/08/2021, 10:12

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ನ್ಯಾಯ ವೈದ್ಯಶಾಸ್ತ್ರ ವಿಭಾಗದಿಂದ ಒಂದು ದಿನದ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ ನಡೆಯಿತು.

ಪ್ರಾಂಶುಪಾಲ ಡಾ. ಎಂ.ಜಿ.ಶಿವರಾಮು ಅವರು ಪ್ರಾಸ್ತವಿಕ ಮಾತನಾಡಿ, ನಾವು ನ್ಯಾಯ, ವೈದ್ಯಶಾಸ್ತ್ರ ವಿಭಾಗದಲ್ಲಿ ವಿಷ ಮಾಹಿತಿ ಕೇಂದ್ರ ಹಾಗೂ ವಿಷ ವಿಶ್ಲೇಷಣಾ ಪ್ರಯೋಗಾಲಯ ಪ್ರಾರಂಭಿಸಿದ್ದೇವೆ. ಇದಕ್ಕೆ ಕೆಲವು ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳೇ ನಮಗೆ ಸ್ಪೂರ್ತಿದಾಯಕ ಎಂದು ಹೇಳಿದರು.

ಈ ಕೇಂದ್ರ ಯಶಸ್ವಿಯಾಗಿ ಕಾಯನಿರ್ವಹಿಸಲು ಪ್ರೇರಕವಾಗಿ, ಪೂರಕವಾಗಿ ಹಾಗೂ ಪ್ರೋತ್ಸಾಹಕವಾಗಿ ಸುಸಜ್ಜಿತ ಪ್ರಯೋಗಾಲಯವಿದೆ. ಈ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮವು ಯಶಸ್ವಿಯಾಗಿ ಇದರ ಪ್ರಯೋಜನ ಎಲ್ಲರಿಗೂ ಲಭಿಸಲಿ ಎಂದು ನುಡಿದರು. 

ನ್ಯಾಯ ವೈದ್ಯಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಸೋಮಶೇಖರ್ ಸಿ., ಅತಿಥಿ ಉಪನ್ಯಾಸಕರಾದ ಡಾ. ಶಂಕರ್ ಎಂ. ಬಕಣ್ಣನವರ್ ಅವರನ್ನು ಪರಿಚಯಿಸಿದರು. 

ಮಣಿಪಾಲ್ ಉನ್ನತ ಶಿಕ್ಷಣ ಸಂಸ್ಥೆಯ ನ್ಯಾಯ ವೈದ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಂಕರ್ ಎಂ. ಬಕಣ್ಣನವರ್ ತಮ್ಮ ಅತಿಥಿ ಉಪನ್ಯಾಸದಲ್ಲಿ ಚಿಕಿತ್ಸಾ ವಿಷ ಶಾಸ್ತ್ರದಲ್ಲಿ ವಿಷ ಮಾಹಿತಿ ಕೇಂದ್ರ ಹಾಗೂ ವಿಷ ವಿಶ್ಲೇಷಣಾ ಪ್ರಯೋಗಾಲಯ ಜವಾಬ್ದಾರಿ ಹಾಗೂ ಕರ್ತವ್ಯಗಳ ಬಗ್ಗೆ ವಿಶೇಷವಾಗಿ ಉಪನ್ಯಾಸ ನೀಡಿದರು.

ದೇಶದಲ್ಲಿ ವರ್ಷಕ್ಕೆ 50 ಸಾವಿರಕ್ಕೂ ಹೆಚ್ಚು ಜನರು ವಿಷ ಸೇವನೆಯಿಂದ ಸಾವಿಗೀಡಾಗುತ್ತಿದ್ದಾರೆ ಎಂದು ಹೇಳಿದ ಅವರು, ಈ ಕೆಂದ್ರದಿಂದ ವಿಷಸೇವನೆ ಆಗುವುದನ್ನು ತಡೆಗಟ್ಟುವುದು ಹಾಗೂ ವಿಷಸೇವನೆ ಆದವರಿಗೆ ಸರಿಯಾದ ಚಿಕಿತ್ಸೆ ಸಿಗುವಂತಾಗಿ ಗುಣಮುಖರಾಗಬೇಕೆಂದು ತಾರ್ಕಿಕವಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಆದಿ ಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಬೋಧಕ ವರ್ಗದವರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಗಣ್ಯರನ್ನು ನ್ಯಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ್ ಸ್ವಾಗತಿಸಿದರು. ನ್ಯಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಚಿನ್ಮಯಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು