11:11 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಆದಿ ಚುಂಚನಗಿರಿ ವೈದ್ಯಕೀಯ ವಿದ್ಯಾಲಯದಲ್ಲಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ 

14/08/2021, 10:12

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ನ್ಯಾಯ ವೈದ್ಯಶಾಸ್ತ್ರ ವಿಭಾಗದಿಂದ ಒಂದು ದಿನದ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ ನಡೆಯಿತು.

ಪ್ರಾಂಶುಪಾಲ ಡಾ. ಎಂ.ಜಿ.ಶಿವರಾಮು ಅವರು ಪ್ರಾಸ್ತವಿಕ ಮಾತನಾಡಿ, ನಾವು ನ್ಯಾಯ, ವೈದ್ಯಶಾಸ್ತ್ರ ವಿಭಾಗದಲ್ಲಿ ವಿಷ ಮಾಹಿತಿ ಕೇಂದ್ರ ಹಾಗೂ ವಿಷ ವಿಶ್ಲೇಷಣಾ ಪ್ರಯೋಗಾಲಯ ಪ್ರಾರಂಭಿಸಿದ್ದೇವೆ. ಇದಕ್ಕೆ ಕೆಲವು ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳೇ ನಮಗೆ ಸ್ಪೂರ್ತಿದಾಯಕ ಎಂದು ಹೇಳಿದರು.

ಈ ಕೇಂದ್ರ ಯಶಸ್ವಿಯಾಗಿ ಕಾಯನಿರ್ವಹಿಸಲು ಪ್ರೇರಕವಾಗಿ, ಪೂರಕವಾಗಿ ಹಾಗೂ ಪ್ರೋತ್ಸಾಹಕವಾಗಿ ಸುಸಜ್ಜಿತ ಪ್ರಯೋಗಾಲಯವಿದೆ. ಈ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮವು ಯಶಸ್ವಿಯಾಗಿ ಇದರ ಪ್ರಯೋಜನ ಎಲ್ಲರಿಗೂ ಲಭಿಸಲಿ ಎಂದು ನುಡಿದರು. 

ನ್ಯಾಯ ವೈದ್ಯಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಸೋಮಶೇಖರ್ ಸಿ., ಅತಿಥಿ ಉಪನ್ಯಾಸಕರಾದ ಡಾ. ಶಂಕರ್ ಎಂ. ಬಕಣ್ಣನವರ್ ಅವರನ್ನು ಪರಿಚಯಿಸಿದರು. 

ಮಣಿಪಾಲ್ ಉನ್ನತ ಶಿಕ್ಷಣ ಸಂಸ್ಥೆಯ ನ್ಯಾಯ ವೈದ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಂಕರ್ ಎಂ. ಬಕಣ್ಣನವರ್ ತಮ್ಮ ಅತಿಥಿ ಉಪನ್ಯಾಸದಲ್ಲಿ ಚಿಕಿತ್ಸಾ ವಿಷ ಶಾಸ್ತ್ರದಲ್ಲಿ ವಿಷ ಮಾಹಿತಿ ಕೇಂದ್ರ ಹಾಗೂ ವಿಷ ವಿಶ್ಲೇಷಣಾ ಪ್ರಯೋಗಾಲಯ ಜವಾಬ್ದಾರಿ ಹಾಗೂ ಕರ್ತವ್ಯಗಳ ಬಗ್ಗೆ ವಿಶೇಷವಾಗಿ ಉಪನ್ಯಾಸ ನೀಡಿದರು.

ದೇಶದಲ್ಲಿ ವರ್ಷಕ್ಕೆ 50 ಸಾವಿರಕ್ಕೂ ಹೆಚ್ಚು ಜನರು ವಿಷ ಸೇವನೆಯಿಂದ ಸಾವಿಗೀಡಾಗುತ್ತಿದ್ದಾರೆ ಎಂದು ಹೇಳಿದ ಅವರು, ಈ ಕೆಂದ್ರದಿಂದ ವಿಷಸೇವನೆ ಆಗುವುದನ್ನು ತಡೆಗಟ್ಟುವುದು ಹಾಗೂ ವಿಷಸೇವನೆ ಆದವರಿಗೆ ಸರಿಯಾದ ಚಿಕಿತ್ಸೆ ಸಿಗುವಂತಾಗಿ ಗುಣಮುಖರಾಗಬೇಕೆಂದು ತಾರ್ಕಿಕವಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಆದಿ ಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಬೋಧಕ ವರ್ಗದವರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಗಣ್ಯರನ್ನು ನ್ಯಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ್ ಸ್ವಾಗತಿಸಿದರು. ನ್ಯಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಚಿನ್ಮಯಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು