9:45 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಆದಿ ಕವಿ ಮಹರ್ಷಿ ವಾಲ್ಮೀಕಿ ತತ್ವ, ಸಂದೇಶ ಜಗತ್ತಿಗೆ ಆದರ್ಶ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಭಿಮತ

28/10/2023, 19:05

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com
ಅಥಣಿ ತಾಲೂಕಾಡಳಿತ, ತಾಲೂಕಾ ಪಂಚಾಯತ್, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸತ್ಯಪ್ರಮೋದ ನಗರದಲ್ಲಿನ ಮಹರ್ಷಿ ವಾಲ್ಮೀಕಿ ಭವನದಲ್ಲಿ ಶನಿವಾರ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.


ಅಧ್ಯಕ್ಷತೆ ವಹಿಸಿ ಮಾತನಾಡಿದ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ
ಲಕ್ಷ್ಮಣ ಸಂ. ಸವದಿ ಅವರು , ಮಹರ್ಷಿ ವಾಲ್ಮೀಕಿಯವರು ಪವಿತ್ರ ರಾಮಾಯಣ ರಚನೆ ಮೂಲಕ ಜೀವನ ಮೌಲ್ಯಗಳನ್ನು ಜಗತ್ತಿಗೆ ತಿಳಿಸಿದ್ದಾರೆ. ವಾಲ್ಮೀಕಿಯವರ ತತ್ವಾದರ್ಶ ಸಾರ್ವಕಾಲಿಕ. ಮಹರ್ಷಿ ವಾಲ್ಮೀಕಿ, ಜಗಜ್ಯೋತಿ ಬಸವಣ್ಣನವರು, ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಇನ್ನಿತರ ಮಹಾತ್ಮರು, ದೇಶಭಕ್ತರು, ಸಂತರು, ಶರಣರು, ಒಂದೇ ಜಾತಿ, ಮತಕ್ಕೆ ಸೀಮಿತರಾದ ವ್ಯಕ್ತಿಗಳಲ್ಲ. ಇವರು ನಾಡಿನ ಜನಾಂಗಕ್ಕೆ ನೀಡಿದ ಕೊಡುಗೆ ಅನನ್ಯ. ಇಂತವರ ಜಯಂತಿ, ಕಾರ್ಯಕ್ರಮಗಳನ್ನು ಸರ್ವ ಧರ್ಮದ ಜನರು ಒಟ್ಟಾಗಿ ಅರ್ಥಪೂರ್ಣವಾಗಿ ಆಚರಿಸಬೇಕು. ಇವರ ತತ್ವ ಸಂದೇಶಗಳನ್ನು ಮುಂದಿನ ಜನಾಂಗದವರಿಗೂ ತಿಳಿಯಪಡಿಸುವ ಮೂಲಕ ಮಹಾತ್ಮರ ಹೆಸರು ಅಜರಾಮರವಾಗಿ ಉಳಿಯುಂತಾಗಬೇಕು ಎಂದು ಅಭಿಪ್ರಾಯಪಟ್ಟರು.
ಮಹರ್ಷಿ ವಾಲ್ಮೀಕಿ ಸಮಾಜದವರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಶಿಕ್ಷಣದ ಮೂಲಕ ಸಮಾಜವು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಥಣಿ ತಹಸೀಲ್ದಾರ್ ವಾಣಿ ಯು., ತಾಪಂ ಇ.ಒ. ಶಿವಾನಂದ ಕಲ್ಲಾಪುರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಎಸ್. ಯಾದವಾಡ, ಪುರಸಭೆ ಮುಖ್ಯಾಧಿಕಾರಿಗಳಾದ ಅಶೋಕ ಗುಡಿಮನಿ, ಪಿಡಬ್ಲುಡಿ ಎಇಇಗಳಾದ ವೀರಣ್ಣ ವಾಲಿ, ಜಯಕುಮಾರ ಹಿರೇಮಠ, ಪಿಎಸ್ಐ ಎಸ್.ಎಮ್ . ಕಾಜೋಳ, ಪುರಸಭೆ ಸದಸ್ಯರಾದ ಸಂತೋಷ ಸಾವಡಕರ್, ರಾಜು ಗುಡೋಡಗಿ, ಬಸವರಾಜ ನಾಯಿಕ, ಬೀರಪ್ಪ ಯಕ್ಕಂಚಿ, ಜಿ.ಪಂ. ಮಾಜಿ ಸದಸ್ಯರಾದ ಶ್ರೀಶೈಲ ಗಸ್ತಿ, ಮುಖಂಡರಾದ ಸಿದರಾಯ ನಾಯಿಕ, ಸಾಹಿತಿಗಳಾದ ಡಾ. ವಿ.ಎಸ್. ಮಾಳಿ, ಲಕ್ಕಪ್ಪ ನಾಯಿಕ ಸೇರಿದಂತೆ ಇತರ ಗಣ್ಯಮಾನ್ಯರು, ವಾಲ್ಮೀಕಿ ಸಮಾಜ ಬಾಂಧವರು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು