12:03 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಆಜಾನ್ ವಿವಾದ: ಬೆಂಗಳೂರಿನಲ್ಲಿ 250 ಮಸೀದಿಗಳಿಗೆ ಪೊಲೀಸ್ ಇಲಾಖೆ ನೋಟಿಸ್‌ 

07/04/2022, 10:48

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಆಜಾನ್ ವಿವಾದದ ಬೆನ್ನೆಲ್ಲೇ ಕರ್ನಾಟಕದ ಮಸೀದಿಗಳಿಗೆ ಲೌಡ್ ಸ್ಪೀಕರ್ ಗಳನ್ನು ಅನುಮತಿ ನೀಡಲಾದ ಡೆಸಿಬಲ್ ಮಟ್ಟದಲ್ಲಿ ಬಳಸುವಂತೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ.

ಈಗಾಗಲೇ ವಿವಿಧ ಸಂಘಟನೆಗಳು ಮಸೀದಿಗಳ ಮೇಲಿನ ಧ್ವನಿವರ್ಧಕಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ತೊಂದರೆ ಉಂಟುಮಾಡುತ್ತಿದ್ದು, ಅದನ್ನು ನಿಷೇಧಿಸುವಂತೆ ಒತ್ತಾಯಿಸಿ ಅಭಿಯಾನ ಪ್ರಾರಂಭಿಸಿದ್ದು, ಇದೀಗ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಬೆಂಗಳೂರು ಒಂದರಲ್ಲೇ ಸುಮಾರು 250 ಮಸೀದಿಗಳು ಪೊಲೀಸರಿಂದ ನೋಟಿಸ್‌ಗಳನ್ನು ಸ್ವೀಕರಿಸಿದ್ದು, ಮಸೀದಿಯ ಸಿಬ್ಬಂದಿ ಲೌಡ್ ಸ್ಪೀಕರ್ ಶಬ್ದವನ್ನು ಅನುಮತಿ ನೀಡಲಾದ ಮಟ್ಟದಲ್ಲಿ ಇರಿಸುವ ಸಾಧನಗಳನ್ನು ಅಳವಡಿಸಲು ಪ್ರಾರಂಭಿಸಿದ್ದಾರೆ.

ಧಾರ್ಮಿಕ ಸಂಸ್ಥೆಗಳು, ಪಬ್‌ಗಳು, ರಾತ್ರಿ ಕ್ಲಬ್‌ಗಳು ಮತ್ತು ಇತರ ಸಂಸ್ಥೆಗಳು ಮತ್ತು ಸಮಾರಂಭಗಳಲ್ಲಿ ಶಬ್ದ ಮಾಲಿನ್ಯ ನಿಯಮಗಳ ಉಲ್ಲಂಘನೆಯನ್ನು ಪರಿಶೀಲಿಸುವಂತೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಪ್ರವೀಣ್ ಸೂದ್ ಅವರು ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು