8:18 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಆಜಾನ್ ವಿವಾದ: ಬೆಂಗಳೂರಿನಲ್ಲಿ 250 ಮಸೀದಿಗಳಿಗೆ ಪೊಲೀಸ್ ಇಲಾಖೆ ನೋಟಿಸ್‌ 

07/04/2022, 10:48

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಆಜಾನ್ ವಿವಾದದ ಬೆನ್ನೆಲ್ಲೇ ಕರ್ನಾಟಕದ ಮಸೀದಿಗಳಿಗೆ ಲೌಡ್ ಸ್ಪೀಕರ್ ಗಳನ್ನು ಅನುಮತಿ ನೀಡಲಾದ ಡೆಸಿಬಲ್ ಮಟ್ಟದಲ್ಲಿ ಬಳಸುವಂತೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ.

ಈಗಾಗಲೇ ವಿವಿಧ ಸಂಘಟನೆಗಳು ಮಸೀದಿಗಳ ಮೇಲಿನ ಧ್ವನಿವರ್ಧಕಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ತೊಂದರೆ ಉಂಟುಮಾಡುತ್ತಿದ್ದು, ಅದನ್ನು ನಿಷೇಧಿಸುವಂತೆ ಒತ್ತಾಯಿಸಿ ಅಭಿಯಾನ ಪ್ರಾರಂಭಿಸಿದ್ದು, ಇದೀಗ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಬೆಂಗಳೂರು ಒಂದರಲ್ಲೇ ಸುಮಾರು 250 ಮಸೀದಿಗಳು ಪೊಲೀಸರಿಂದ ನೋಟಿಸ್‌ಗಳನ್ನು ಸ್ವೀಕರಿಸಿದ್ದು, ಮಸೀದಿಯ ಸಿಬ್ಬಂದಿ ಲೌಡ್ ಸ್ಪೀಕರ್ ಶಬ್ದವನ್ನು ಅನುಮತಿ ನೀಡಲಾದ ಮಟ್ಟದಲ್ಲಿ ಇರಿಸುವ ಸಾಧನಗಳನ್ನು ಅಳವಡಿಸಲು ಪ್ರಾರಂಭಿಸಿದ್ದಾರೆ.

ಧಾರ್ಮಿಕ ಸಂಸ್ಥೆಗಳು, ಪಬ್‌ಗಳು, ರಾತ್ರಿ ಕ್ಲಬ್‌ಗಳು ಮತ್ತು ಇತರ ಸಂಸ್ಥೆಗಳು ಮತ್ತು ಸಮಾರಂಭಗಳಲ್ಲಿ ಶಬ್ದ ಮಾಲಿನ್ಯ ನಿಯಮಗಳ ಉಲ್ಲಂಘನೆಯನ್ನು ಪರಿಶೀಲಿಸುವಂತೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಪ್ರವೀಣ್ ಸೂದ್ ಅವರು ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು