3:01 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಆಜಾನ್ ವಿವಾದ: ಬೆಂಗಳೂರಿನಲ್ಲಿ 250 ಮಸೀದಿಗಳಿಗೆ ಪೊಲೀಸ್ ಇಲಾಖೆ ನೋಟಿಸ್‌ 

07/04/2022, 10:48

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಆಜಾನ್ ವಿವಾದದ ಬೆನ್ನೆಲ್ಲೇ ಕರ್ನಾಟಕದ ಮಸೀದಿಗಳಿಗೆ ಲೌಡ್ ಸ್ಪೀಕರ್ ಗಳನ್ನು ಅನುಮತಿ ನೀಡಲಾದ ಡೆಸಿಬಲ್ ಮಟ್ಟದಲ್ಲಿ ಬಳಸುವಂತೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ.

ಈಗಾಗಲೇ ವಿವಿಧ ಸಂಘಟನೆಗಳು ಮಸೀದಿಗಳ ಮೇಲಿನ ಧ್ವನಿವರ್ಧಕಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ತೊಂದರೆ ಉಂಟುಮಾಡುತ್ತಿದ್ದು, ಅದನ್ನು ನಿಷೇಧಿಸುವಂತೆ ಒತ್ತಾಯಿಸಿ ಅಭಿಯಾನ ಪ್ರಾರಂಭಿಸಿದ್ದು, ಇದೀಗ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಬೆಂಗಳೂರು ಒಂದರಲ್ಲೇ ಸುಮಾರು 250 ಮಸೀದಿಗಳು ಪೊಲೀಸರಿಂದ ನೋಟಿಸ್‌ಗಳನ್ನು ಸ್ವೀಕರಿಸಿದ್ದು, ಮಸೀದಿಯ ಸಿಬ್ಬಂದಿ ಲೌಡ್ ಸ್ಪೀಕರ್ ಶಬ್ದವನ್ನು ಅನುಮತಿ ನೀಡಲಾದ ಮಟ್ಟದಲ್ಲಿ ಇರಿಸುವ ಸಾಧನಗಳನ್ನು ಅಳವಡಿಸಲು ಪ್ರಾರಂಭಿಸಿದ್ದಾರೆ.

ಧಾರ್ಮಿಕ ಸಂಸ್ಥೆಗಳು, ಪಬ್‌ಗಳು, ರಾತ್ರಿ ಕ್ಲಬ್‌ಗಳು ಮತ್ತು ಇತರ ಸಂಸ್ಥೆಗಳು ಮತ್ತು ಸಮಾರಂಭಗಳಲ್ಲಿ ಶಬ್ದ ಮಾಲಿನ್ಯ ನಿಯಮಗಳ ಉಲ್ಲಂಘನೆಯನ್ನು ಪರಿಶೀಲಿಸುವಂತೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಪ್ರವೀಣ್ ಸೂದ್ ಅವರು ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು