5:51 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಆಜಾನ್ ವಿವಾದ: ಬೆಂಗಳೂರಿನಲ್ಲಿ 250 ಮಸೀದಿಗಳಿಗೆ ಪೊಲೀಸ್ ಇಲಾಖೆ ನೋಟಿಸ್‌ 

07/04/2022, 10:48

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಆಜಾನ್ ವಿವಾದದ ಬೆನ್ನೆಲ್ಲೇ ಕರ್ನಾಟಕದ ಮಸೀದಿಗಳಿಗೆ ಲೌಡ್ ಸ್ಪೀಕರ್ ಗಳನ್ನು ಅನುಮತಿ ನೀಡಲಾದ ಡೆಸಿಬಲ್ ಮಟ್ಟದಲ್ಲಿ ಬಳಸುವಂತೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ.

ಈಗಾಗಲೇ ವಿವಿಧ ಸಂಘಟನೆಗಳು ಮಸೀದಿಗಳ ಮೇಲಿನ ಧ್ವನಿವರ್ಧಕಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ತೊಂದರೆ ಉಂಟುಮಾಡುತ್ತಿದ್ದು, ಅದನ್ನು ನಿಷೇಧಿಸುವಂತೆ ಒತ್ತಾಯಿಸಿ ಅಭಿಯಾನ ಪ್ರಾರಂಭಿಸಿದ್ದು, ಇದೀಗ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಬೆಂಗಳೂರು ಒಂದರಲ್ಲೇ ಸುಮಾರು 250 ಮಸೀದಿಗಳು ಪೊಲೀಸರಿಂದ ನೋಟಿಸ್‌ಗಳನ್ನು ಸ್ವೀಕರಿಸಿದ್ದು, ಮಸೀದಿಯ ಸಿಬ್ಬಂದಿ ಲೌಡ್ ಸ್ಪೀಕರ್ ಶಬ್ದವನ್ನು ಅನುಮತಿ ನೀಡಲಾದ ಮಟ್ಟದಲ್ಲಿ ಇರಿಸುವ ಸಾಧನಗಳನ್ನು ಅಳವಡಿಸಲು ಪ್ರಾರಂಭಿಸಿದ್ದಾರೆ.

ಧಾರ್ಮಿಕ ಸಂಸ್ಥೆಗಳು, ಪಬ್‌ಗಳು, ರಾತ್ರಿ ಕ್ಲಬ್‌ಗಳು ಮತ್ತು ಇತರ ಸಂಸ್ಥೆಗಳು ಮತ್ತು ಸಮಾರಂಭಗಳಲ್ಲಿ ಶಬ್ದ ಮಾಲಿನ್ಯ ನಿಯಮಗಳ ಉಲ್ಲಂಘನೆಯನ್ನು ಪರಿಶೀಲಿಸುವಂತೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಪ್ರವೀಣ್ ಸೂದ್ ಅವರು ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು