2:13 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಆಮ್ ಆದ್ಮಿ ಪಾರ್ಟಿ: ರಾಜ್ಯದಲ್ಲಿ 107 ಮಂದಿ ಕೋಟ್ಯಧಿಪತಿಗಳು!: 48 ಮಂದಿ ಕ್ರಿಮಿನಲ್ ಪ್ರಕರಣವಿರುವ ಅಭ್ಯರ್ಥಿಗಳು ಸ್ಪರ್ಧೆ!

04/05/2023, 23:57

ಬೆಂಗಳೂರು(reporterkarnataka.com): ಬಡವರ, ಜನಸಾಮಾನ್ಯರ ಪಕ್ಷವೆಂದೇ ಬಿಂಬಿಸಿ ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಾರ್ಟಿಯಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ 48 ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಹಾಗೆ 107 ಮಂದಿ ಕೋಟ್ಯಧಿಪತಿಗಳು ವಿಜಯಕ್ಕಾಗಿ ಹೆಣಗಾಡುತ್ತಿದ್ದಾರೆ.

ಆಮ್ ಆದ್ಮಿ ಪಾರ್ಟಿಯಿಂದ ರಾಜ್ಯದಲ್ಲಿ ಒಟ್ಟು 208 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಇವರಲ್ಲಿ 107 ಮಂದಿ ಕೋಟ್ಯಧಿಪತಿಗಳು ಅಖಾಡಕ್ಕಿಳಿದಿದ್ದಾರೆ. ಹಾಗೆ ಬಿಜೆಪಿಯಿಂದ 216, ಕಾಂಗ್ರೆಸ್ ನಿಂದ 215, ಜನತಾ ದಳದಿಂದ 170 ಮಂದಿ ಕೋಟ್ಯಧಿಪತಿಗಳು ಕಣದಲ್ಲಿ ಸೆಣಸಾಡುತ್ತಿದ್ದಾರೆ. 60ಕ್ಕೂ ಹೆಚ್ಚು ಅಭ್ಯರ್ಥಿ ಗಳು 100 ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ. ಒಟ್ಟಾರೆ ಪ್ರತಿ ಅಭ್ಯರ್ಥಿ ಯ ಸರಾಸರಿ ಆಸ್ತಿ 12.26 ಕೋಟಿ ರೂ. ಆಗಿರುತ್ತದೆ.
ರಾಜ್ಯ ವಿಧಾನಸಭೆ ಚುನಾವಣೆಯ ಅಂತಿಮ ಕಣದಲ್ಲಿರುವ 2613 ಮಂದಿ ಅಭ್ಯರ್ಥಿಗಳ ಪೈಕಿ 581 ಮಂದಿ ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇವರಲ್ಲಿ ಆಡಳಿತರೂಢ ಬಿಜೆಪಿ, ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ಮತ್ತು ಜನತಾ ದಳದ ಅಭ್ಯರ್ಥಿಗಳು ಕೂಡ ಸೇರಿದ್ದಾರೆ.
ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ 581 ಆಭ್ಯರ್ಥಿಗಳಲ್ಲಿ 404 ಮಂದಿ ಅತ್ಯಾಚಾರ ಸೇರಿದಂತೆ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. 49 ಅಭ್ಯರ್ಥಿ ಗಳು ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣ ಎದುರಿಸುತ್ತಿದ್ದಾರೆ. ಬಿಜೆಪಿಯ 96 ಅಭ್ಯರ್ಥಿಗಳು, ಕಾಂಗ್ರೆಸ್ ನ 122 ಅಭ್ಯರ್ಥಿಗಳು, ಜನತಾ ದಳದ 70 ಅಭ್ಯರ್ಥಿಗಳು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ವಿಶೇಷವೆಂದರೆ ಜನಸಾಮಾನ್ಯರ ಪಕ್ಷ ಎಂದು ಕರೆಸಿಕೊಳ್ಳುವ ಆಮ್ ಆದ್ಮಿ ಪಾರ್ಟಿಯು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ 48 ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ಈ ಮಾಹಿತಿಯನ್ನು ಬಹಿರಂಗಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು