1:59 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಅನಾಥ, ಬಡ ಮಕ್ಕಳಿಗೆ ನಿತ್ಯ ಅನ್ನದಾನ: ಮಹಾನ್ ಸಾಧಕ ಮಸ್ಕಿಯ ಡಾ. ಶಿವಶರಣಪ್ಪ ಇತ್ಲಿ

03/10/2021, 16:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸಿಂಧನೂರಿನ ಪಿಡಬ್ಲ್ಯೂಡಿ ಕ್ಯಾಂಪ್ ನಲ್ಲಿರುವ ಆಶಾಕಿರಣ ಅನಾಥ ಮತ್ತು ಬಡಮಕ್ಕಳ ಆಶ್ರಮದಲ್ಲಿ ನಿತ್ಯ ಅನ್ನದಾನ ಜತೆಗೆ ಶಿಕ್ಷಣಕ್ಕೆ ಸಾಥ್ ನೀಡುತ್ತಿರುವ ಡಾ. ಶಿವಶರಣಪ್ಪ ಕುಟುಂಬವು ಇದೀಗ ಮಸ್ಕಿ ಭಾಗದಲ್ಲಿ ಡಾ. ಶಿವಶರಣಪ್ಪ ಫೌಂಡೇಶನ್ ಚಾಲನೆ ನೀಡಿದೆ.


ಮೂಲತಃ ರಾಯಚೂರಿನವರಾದ ಡಾ. ಶಿವಶರಣಪ್ಪ ಕುಟುಂಬವು 50 ವರ್ಷಗಳ ಹಿಂದೆ ಮಸ್ಕಿಗೆ ಆಗಮಿಸಿತ್ತು. ಮಸ್ಕಿಯಲ್ಲಿ ಆಸ್ಪತ್ರೆ ತೆರೆದು ಡಾ. ಇತ್ಲಿ ಅವರು ವೈದ್ಯಕೀಯ ನೆರವಿನ ಜತೆಗೆ ಸಮಾಜಮುಖಿ ಕೆಲಸ ಮಾಡಲಾರಂಭಿಸಿದರು. ಡಾ. ಇತ್ಲಿ ಅವರ ಪುಣ್ಯ ಕಾರ್ಯಕ್ಕೆ ಅವರ ಕುಟುಂಬ ಕೈಜೋಡಿಸಿತು. ಇದೀಗ ಡಾ. ಶಿವಶರಣಪ್ಪ ಫೌಂಡೇಶನ್ ಎಂಬ ಸಂಸ್ಥೆ ತಲೆ ಎತ್ತಿ ನಿಂತಿದೆ. ಡಾ. ಇತ್ಲಿ ಅವರು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ಘನತೆ ಮೆರೆದಿದ್ದಾರೆ. ಇಲ್ಲಿ ಬಡವರು, ಅನಾಥರು, ದಿಕ್ಕು ಇಲ್ಲದವರು ಡಾ. ಇತ್ಲಿ ಅವರನ್ನು ದೇವರ ತರಹ ಪೂಜಿಸುತ್ತಾರೆ. ಸಿಂಧನೂರಿನ ಪಿಡಬ್ಲ್ಯೂಡಿಕ್ಯಾಂಪ್ ನಲ್ಲಿರುವ ಆಶಾಕಿರಣ ಅನಾಥ ಮತ್ತು ಬಡಮಕ್ಕಳಿಗೆ ಅನ್ನದಾನ ಮಾಡುತ್ತಿದ್ದರು. ಜತೆಗೆ ಅವರ ಶಿಕ್ಷಣಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು