11:24 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಆನಂದ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದೇನು? 

11/08/2021, 12:25

ಬೆಂಗಳೂರು(reporterkarnataka.com): ತನಗೆ ನೀಡಿದ ಖಾತೆಯಿಂದ ಅಸಮಾಧಾನಗೊಂದ ಸಚಿವ ಆನಂದ್ ಸಿಂಗ್ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಖಾತೆ ಹಂಚಿಕೆ ಬಳಿಕ ಸಂಪುಟದಲ್ಲಿ ತಕ್ಕ ಮಟ್ಟಿಗೆ ಅಸಮಾಧಾನ ಭುಗಿಲೆದ್ದಿದ್ದು, ಎಂ.ಟಿ. ಬಿ. ನಾಗರಾಜ್, ಆನಂದ ಸಿಂಗ್ ಸೇರಿದಂತೆ ಕೆಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದರು. ಆನಂದ್ ಸಿಂಗ್ ಅವರು ರಾಜೀನಾಮೆಗೂ ಮುಂದಾಗಿದ್ದರು ಎನ್ನಲಾಗಿದೆ. ಆನಂದ್ ಸಿಂಗ್ ಅವರಿಗೆ ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ನೀಡಲಾಗಿದೆ. ಬಳ್ಳಾರಿ ಮೂಲದ ಗಣಿ ಉದ್ಯಮಿಯಾದ ಆನಂದ್ ಸಿಂಗ್ ಅವರಿಗೆ ಪರಿಸರ ಖಾತೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎನ್ನಲಾಗಿದೆ. ಅದೇ ರೀತಿ ಬಹುಕೋಟಿ ಒಡೆಯನಾದ ಎಂಟಿಬಿ ಅವರಿಗೆ ಪೌರಾಡಳಿತ ಖಾತೆ ಬೇಡವಾಗಿದೆ. ಆನಂದ್ ಸಿಂಗ್ ಅವರು ಇಂಧನ ಮತ್ತು ಲೋಕೋಪಯೋಗಿ ಖಾತೆಯ ಮೇಲೆ ಕಣ್ಣಿಟ್ಟಿದ್ದರು.ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ನೀಡಿದ ಇಂಧನ ಖಾತೆಯ ಮೇಲೆ ಆನಂದ್ ಸಿಂಗ್ ಈಗ ದೃಷ್ಟಿ ಹಾಯಿಸಿದ್ದಾರೆ. ನೂತನವಾಗಿ ಸಚಿವರಾದ ಅರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ, ಸುನಿಲ್ ಕುಮಾರ್ ಗೆ ಇಂಧನ ನೀಡಿರುವ ಬಗ್ಗೆ ಹಲವು ಮಂದಿ ಹಿರಿಯ ಸಚಿವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ ಆನಂದ ಸಿಂಗ್ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ನಿರಾಕರಿಸಿದ್ದಾರೆ. ಆನಂದ್ ಸಿಂಗ್ ತನ್ನ ಸಂಪರ್ಕದಲ್ಲಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು