8:55 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಆನಂದ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದೇನು? 

11/08/2021, 12:25

ಬೆಂಗಳೂರು(reporterkarnataka.com): ತನಗೆ ನೀಡಿದ ಖಾತೆಯಿಂದ ಅಸಮಾಧಾನಗೊಂದ ಸಚಿವ ಆನಂದ್ ಸಿಂಗ್ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಖಾತೆ ಹಂಚಿಕೆ ಬಳಿಕ ಸಂಪುಟದಲ್ಲಿ ತಕ್ಕ ಮಟ್ಟಿಗೆ ಅಸಮಾಧಾನ ಭುಗಿಲೆದ್ದಿದ್ದು, ಎಂ.ಟಿ. ಬಿ. ನಾಗರಾಜ್, ಆನಂದ ಸಿಂಗ್ ಸೇರಿದಂತೆ ಕೆಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದರು. ಆನಂದ್ ಸಿಂಗ್ ಅವರು ರಾಜೀನಾಮೆಗೂ ಮುಂದಾಗಿದ್ದರು ಎನ್ನಲಾಗಿದೆ. ಆನಂದ್ ಸಿಂಗ್ ಅವರಿಗೆ ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ನೀಡಲಾಗಿದೆ. ಬಳ್ಳಾರಿ ಮೂಲದ ಗಣಿ ಉದ್ಯಮಿಯಾದ ಆನಂದ್ ಸಿಂಗ್ ಅವರಿಗೆ ಪರಿಸರ ಖಾತೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎನ್ನಲಾಗಿದೆ. ಅದೇ ರೀತಿ ಬಹುಕೋಟಿ ಒಡೆಯನಾದ ಎಂಟಿಬಿ ಅವರಿಗೆ ಪೌರಾಡಳಿತ ಖಾತೆ ಬೇಡವಾಗಿದೆ. ಆನಂದ್ ಸಿಂಗ್ ಅವರು ಇಂಧನ ಮತ್ತು ಲೋಕೋಪಯೋಗಿ ಖಾತೆಯ ಮೇಲೆ ಕಣ್ಣಿಟ್ಟಿದ್ದರು.ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ನೀಡಿದ ಇಂಧನ ಖಾತೆಯ ಮೇಲೆ ಆನಂದ್ ಸಿಂಗ್ ಈಗ ದೃಷ್ಟಿ ಹಾಯಿಸಿದ್ದಾರೆ. ನೂತನವಾಗಿ ಸಚಿವರಾದ ಅರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ, ಸುನಿಲ್ ಕುಮಾರ್ ಗೆ ಇಂಧನ ನೀಡಿರುವ ಬಗ್ಗೆ ಹಲವು ಮಂದಿ ಹಿರಿಯ ಸಚಿವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ ಆನಂದ ಸಿಂಗ್ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ನಿರಾಕರಿಸಿದ್ದಾರೆ. ಆನಂದ್ ಸಿಂಗ್ ತನ್ನ ಸಂಪರ್ಕದಲ್ಲಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು