5:50 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಆನೆ ದಾಳಿ ನಿಯಂತ್ರಿಸಲು ವಿಫಲ: ಆಕ್ರೋಶಿತ ಗ್ರಾಮಸ್ಥರಿಂದ ಫಾರೆಸ್ಟ್ ಕಚೇರಿ ಮೇಲೆ ದಾಳಿ

26/11/2022, 20:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com
ಆನೆ ಹಾವಳಿಯನ್ನು ನಿಯಂತ್ರಿಸಲು ವಿಫಲವಾಗಿರುವುದನ್ನು ಪ್ರತಿಭಟಿಸಿ ಗ್ರಾಮಸ್ಥರು ಕಳ್ಳ ಬೇಟೆ ನಿಗ್ರಹ ಶಿಬಿರವನ್ನ ಧ್ವಂಸ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ.
ಆಕ್ರೋಶಗೊಂಡ ಯುವಕರ ತಂಡ ಫಾರೆಸ್ಟ್ ಕಚೇರಿಯಲ್ಲಿ
ಕೈಗೆ ಸಿಕ್ಕ ಸಿಕ್ಕ ವಸ್ತುಗಳನ್ನೆಲ್ಲಾ ಪುಡಿ ಮಾಡಿದ ಆಕ್ರೋಶ ವ್ಯಕ್ತಪಡಿಸಿದರು.

ಆನೆಯನ್ನು ಓಡಿಸಲು ನಿಮಗೆ ಪಟಾಕಿ ಕೊಡುವ ಯೋಗ್ಯತೆ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಆನೆ ನಿಯಂತ್ರಿಸಕ್ಕೆ ಆಗಲ್ಲ, ತಿನ್ನೋಕೆ ಸೋನಾ ಮುಸುರಿ ಅಕ್ಕಿ ಬೇಕು ಎಂದು ಕಿಡಿ ಕಾರಿದರು. ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಅರಣ್ಯ ಇಲಾಖೆ ಸಿಬ್ಬಂದಿ ವೀಡಿಯೋ ಮಾಡುತ್ತಿದ್ದಾಗ ಮುಖ ತೋರಿಸಿ…ತೋರಿಸಿ ಯುವಕರು ಹೆಸರು ಹೇಳಿದರು.


ಆನೆಗಳವ ನಿರಂತರ ದಾಳಿಯಿಂದ ಮಲೆನಾಡಿಗರು ಕಂಗಟ್ಟಿ ಹೋಗಿದ್ದಾರೆ. ನಾಲ್ಕು ದಿನದ ಹಿಂದೆ ಆನೆ ದಾಳಿಗೆ 35 ವರ್ಷದ ಮಹಿಳೆ ಸಾವನ್ನಪ್ಪಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು