6:08 AM Monday13 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಆನೆ ದಂತ ಮಾರಾಟ ಯತ್ನ: 5 ಮಂದಿ ಸೆರೆ; ಜೂ 18 ರವರೆಗೆ ನ್ಯಾಯಾಂಗ ಬಂಧನ 

08/06/2022, 13:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇಲ್ಲಿಗೆ ಸಮೀಪದ ಅಲ್ಲಂಪುರ ಬಳಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ .

ಕತ್ಲೆಕಾನ್ ತೋಟದ ಮೇಸ್ತ್ರಿ ಆರ್ . ಶಿವಕುಮಾರ್,ಮಸ್ಕಲ್  ಮರಡಿಯ ಕೆಲಸಗಾರ ಸುಂದರೇಶ್, ತರಿಕೆರೆ ತಾಲ್ಲೂಕು ನಂದಿಬಟ್ಟಲಿನ ಪಿ. ಮಹಾಂತೇಶ್, ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರಿನ  ವೆಲ್ಡರ್ ನೂರ್ ಅಹ್ಮದ್ ,ಚಿತ್ರದುರ್ಗ ತಾಲ್ಲೂಕಿನ  ಪಳಿಕೆಹಳ್ಳಿಯ ಅಂಜನಪ್ಪ ಬಂಧಿತರು.

ಅಲ್ಲಂಪುರ ಪೆಟ್ರೋಲ್ ಬಂಕ್ ಸಮೀಪ ಆನೆ ದಂತ ಮಾರಾಟಕ್ಕೆ ಯತ್ನಿಸಿದಾಗ ಇವರನ್ನು ಬಂಧಿಸಿದ್ದು ಆನೆ ದಂತ ಓಮ್ನಿ ವಾಹನ ವಶಪಡಿಸಿಕೊಳ್ಳಲಾಗಿದೆ .ಇಲ್ಲಿನ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಭದ್ರಾ ವನ್ಯಜೀವಿ ವಲಯದಲ್ಲಿ ಆನೆದಂತ ತಂದಿರುವುದನ್ನು ಖಚಿತಪಡಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಜೂನ್ 18 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ ಆದೇಶ ನೀಡಿದೆ .

ಇತ್ತೀಚಿನ ಸುದ್ದಿ

ಜಾಹೀರಾತು